August 25, 2026
Tuesday, August 25, 2026
spot_img

ಕುರ್ಚಿ ಆಸೆಗಾಗಿ ಡಿಕೆಶಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ: ಜೆಡಿಎಸ್‌ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕುರ್ಚಿ ಆಸೆಗಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ ಮುಗಿಸುತ್ತಿದ್ದಾರೆ ಎಂದು ಜೆಡಿಎಸ್‌ ಗರಂ ಆಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಲಾಯಿತು. ಇಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರದಲ್ಲಿ ಎಲ್ಲವೂ ಸರಿಯಲ್ಲ. ಕುರ್ಚಿ ಆಸೆಗಾಗಿ ಡಿಕೆ.ಶಿವಕುಮಾರ್ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆಂದು ಆರೋಪಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !