Sunday, December 10, 2023

Latest Posts

ಶಾಸಕರು, ಸಚಿವರಿಗೆ ಮತ್ತೊಮ್ಮೆ ಖಡಕ್ ವಾರ್ನಿಂಗ್: ಬಹಿರಂಗ ಹೇಳಿಕೆ ಕೊಟ್ಟು ರಾಜಕೀಯ ಭವಿಷ್ಯ ಹಾಳು ಮಾಡಬೇಡಿ ಎಂದ ಡಿಕೆಶಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಸಕರು, ಸಚಿವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಖಡಕ್ ವಾರ್ನಿಂಗ್ ನೀಡಿದ್ದು, ಬಹಿರಂಗ ಹೇಳಿಕೆ ನೀಡಿ ‘ರಾಜಕೀಯ ಭವಿಷ್ಯ’ ಹಾಳು ಮಾಡ್ಕೊಬೇಡಿ ಎಂದು ಸೂಚಿಸಿದ್ದಾರೆ .

ಪಕ್ಷದ ಬಗ್ಗೆ ಸಚಿವರು, ಶಾಸಕರು ಪಕ್ಷದ ಚೌಕಟ್ಟು ಮೀರಿ ಬಹಿರಂಗ ಹೇಳಿಕೆ ನೀಡುತ್ತಿರುವುದು ಕಂಡು ಬಂದ ಬೆನ್ನಲ್ಲೇ ಇಂದು ಕಾವೇರಿ ನಿವಾಸದಲ್ಲಿ ಡಿಕೆಶಿ ಮತ್ತೊಮ್ಮೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಯಾವುದೇ ಹೇಳಿಕೆಗೆ ರಿಯಾಕ್ಟ್ ಮಾಡಬೇಡಿ , ಯಾರೂ ಕೂಡ ರಾಜಕೀಯ ಭವಿಷ್ಯವನ್ನು ಹಾಳು ಮಾಡಿಕೊಳ್ಳಲು ಹೋಗಬೇಡಿ, ಜತೆಗೆ ಪಕ್ಷದ ಭವಿಷ್ಯವನ್ನು ಕೂಡ ಹಾಳು ಮಾಡ್ಬೇಡಿ ಎಂದು ಖಡಕ್ ಸೂಚನೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!