ಹೊಸದಿಗಂತ ಡಿಜಿಟಲ್ ಡೆಸ್ಕ್:
ʻನಮಸ್ತೇ ಸದಾ ವತ್ಸಲೇ ಮಾತೃಭೂಮೇʼ ಅಂತ ಆರ್ಎಸ್ಎಸ್ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗಮನ ಸೆಳೆದಿದ್ದಾರೆ.
ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ವಿಚಾರದ ಚರ್ಚೆ ನಡೆಯುತ್ತಿತ್ತು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉತ್ತರ ನೀಡಿದರು. ಇದೇ ವೇಳೆ ವಿಪಕ್ಷ ನಾಯಕ ಆರ್. ಅಶೋಕ್, ಆರ್ ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಎದ್ದು ನಿಂತ ಡಿಕೆಶಿ, ನಾನು ಕ್ರಿಕೆಟ್ ಅಭಿಮಾನಿ, ಕೆಎಸ್ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ. ಕಪ್ಗೂ ಮುತ್ತು ಕೊಟ್ಟಿದ್ದೆ ಎಂದರು.
ಈ ವೇಳೆ ಆರ್ಎಸ್ಎಸ್ ಚಡ್ಡಿ ಹಾಕಿದ್ರಲ್ಲ ಅಂತ ಅಶೋಕ್ ಟಾಂಗ್ ಕೊಟ್ಟರು. ಇದಕ್ಕೆ ಪ್ರತಿಯಾಗಿ ಡಿಕೆಶಿ, ʻನಮಸ್ತೇ ಸದಾ ವತ್ಸಲೇ ಮಾತೃಭೂಮೇʼ ಗೀತೆಯನ್ನು ಹಾಡಿ, ಈಗ ಅದೆಲ್ಲ ಚರ್ಚೆ ಬೇಡ ಅಂತ ಟಕ್ಕರ್ ಕೊಟ್ಟರು.