ಚುನಾವಣಾ ಸೋಲಿನಿಂದ ಕಂಗೆಟ್ಟ ನಿಖಿಲ್ ಕುಮಾರಸ್ವಾಮಿ: ಕರೆ ಮಾಡಿ ಸಾಂತ್ವನ ಹೇಳಿದ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಸೋಲು ಕಂಡಿರುವ ನಿಖಿಲ್ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಫೋನ್ ಮೂಲಕ ಸಾಂತ್ವನ ಹೇಳಿದ ಡಿಕೆಶಿ, ನೀನು ಎರಡು ಬಾರಿ ಸೋತಿದ್ದೀಯಾ, ಆದರೆ ನಿನಗೆ ರಾಜಕೀಯ ಕುಟುಂಬದ ಹಿನ್ನೆಲೆ ಇದೆ. ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಷ್ಟು ಮಟ್ಟಕ್ಕೆ ಬೆಳೆದಿದ್ದೇನೆ. ಈ ಸೋಲಿನಿಂದ ಕಂಗೆಡಬೇಡ, ಕ್ಷೇತ್ರದಲ್ಲಿ ಓಡಾಟ ನಡೆಸಿ ಜನರ ಜೊತೆ ನಿಲ್ಲಬೇಕು. ಸೋಲಿನಿಂದ ಹತಾಶನಾಗಬೇಡ ಎಂದು ಧೈರ್ಯ ತುಂಬಿದ ಅವರು, ರಾಜಕೀಯದಲ್ಲಿ ಏಳು- ಬೀಳು ಸಹಜ. ಮುಂದಿನ ದಿನಗಳಲ್ಲಿ ನಿನಗೆ ರಾಜಕೀಯದಲ್ಲಿ ಭವಿಷ್ಯ ಇದೆ ಎಂದು ಹಾರೈಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಾರಿಯ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ (JDS) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಪರಾಭವಗೊಳಿಸಿ ಭರ್ಜರಿ ಗೆಲುವು ಸಾಧಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!