ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಹೊಸ್ತಿಲಲ್ಲಿ ಡಿ.ಕೆ.ಶಿವಕುಮಾರ್ ಅವರ ಪಾಲಿಗೆ ದೊಡ್ಡ ಗಂಡಾಂತರ ತಪ್ಪಿದೆ. ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುವಾಗ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್ ಗಾಜು ಪೀಸ್ ಪೀಸ್ ಆಗಿದೆ. ಅದೃಷ್ಟವಶಾತ್ ಕ್ಷಣಮಾತ್ರದಲ್ಲಿ ಡಿಕೆಶಿ ಬಚಾವ್ ಆಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಕ್ಕೂರ್ ಹೆಲಿಪ್ಯಾಡ್ನಿಂದ ಟೇಕ್ ಆಫ್ ಆದೆ ಕೆಲವೇ ಕ್ಷಣಗಳಲ್ಲಿ ದುರಂತ ನಡೆದಿದ್ದು, ಡಿಕೆಶಿ ಜೊತೆಗಿದ್ದ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳಬಾಗಿಲಿಗೆ ಚುನಾವಣಾ ಪ್ರಚಾರಕ್ಕೆಂದು ತೆರಳುತ್ತಿದ್ದ ವೇಳೆ ಅಚಾತುರ್ಯ ಉಂಟಾಗಿದೆ. ಪೈಲೆಟ್ ಹರಸಾಹಸ ಪಟ್ಟು ಹೆಲಿಕಾಪ್ಟರ್ ಅನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ.
ಈ ಕುರಿತು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ʻಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದೆ ಎಲ್ಲರೂ ಸುರಕ್ಷಿತವಾಗಿದ್ದಾರೆʼ. ಎಂದು ಬರೆದಿದ್ದಾರೆ.
ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದೆ ಎಲ್ಲರೂ ಸುರಕ್ಷಿತವಾಗಿದ್ದಾರೆ. pic.twitter.com/nwMDlazxU1
— Karnataka Congress (@INCKarnataka) May 2, 2023