ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಪರ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತಾಡಿದ ಅವರು, ರಾಜ್ಯದಲ್ಲಿ ಮಳೆಯಿಲ್ಲದೆ ಕೆರೆ ಕುಂಟೆಗಳು, ಬಾವಿಗಳು ಬತ್ತಿವೆ, ನೀರಿನ ದುಸ್ಥಿತಿ ಬಂದಿದೆ, ರಾಮನಗರವನ್ನು ಉಳಿಸುತ್ತೇನೆ ಎಂದಿರುವ ಶಿವಕುಮಾರ್ ಎಲ್ಲಿ ಎಂದು ಯೋಗೇಶ್ವರ್ ಪ್ರಶ್ನಿಸಿದರು.
ಡಿಕೆ.ಶಿವಕುಮಾರ್ ಜನರನ್ನು ಮೆಚ್ಚಿಸಲು ಮತ್ತು ಮತ ಪಡೆಯಲು ಮಾತ್ರ ಮೇಕೆದಾಟು ಯೋಜನೆಗೆ ಪ್ರಚಾರ ಮಾಡುತ್ತಿದ್ದಾರೆ ಎಂದು ಯೋಗೇಶ್ವರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಕ್ಷಸ ಸಂಸ್ಕೃತಿಯನ್ನು ನಾಶ ಮಾಡಲು ದೇವೇಗೌಡರು ಹಾಗೂ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ಒಗ್ಗೂಡಿಸಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿರುವುದರಿಂದ ಕಾಂಗ್ರೆಸ್ ಸೋಲನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.