ಡಿಕೆಶಿ ರಾಜಕೀಯ ಭವಿಷ್ಯ ಇಂದು ನಿರ್ಧಾರ, ನಾಮಪತ್ರ ತಿರಸ್ಕೃತವಾಗುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಈ ಬಾರಿ ಮುಖ್ಯಮಂತ್ರಿಯಾಗೋ ಯೋಚನೆಯಿರುವ ಡಿಕೆಶಿ ನಾಮಪತ್ರ ತಿರಸ್ಕೃತವಾಗುತ್ತದಾ? ಇದಕ್ಕೆ ಇಂದು ಉತ್ತರ ಸಿಗಲಿದೆ..

ಯಾವುದಕ್ಕೂ ಇರಲಿ ಎಂದು ಕನಕಪುರ ಕ್ಷೇತ್ರದಿಂದ ತಮ್ಮ ಡಿ.ಕೆ.ಸುರೇಶ್ ಅವರಿಂದಲೂ ನಾಮಪತ್ರವನ್ನು ಸಲ್ಲಿಸುವಂತೆ ಮಾಡಿದ್ದಾರೆ. ಡಿಕೆಶಿ ನಾಮಪತ್ರ ತಿರಸ್ಕಾರವಾದರೆ ಎನ್ನುವ ಮುಂಜಾಗ್ರತಾ ಕ್ರಮ ಇದಾಗಿದೆ.

ಬೆಳಗ್ಗೆ 11 ಗಂಟೆ ನಂತರ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಸಲಿದ್ದು, ನಾಮಪತ್ರದಲ್ಲಿ ಲೋಪದೋಷಗಳು ಕಂಡುಬಂದರೆ ಅಂಥ ನಾಮಪತ್ರಗಳನ್ನು ರಿಜೆಕ್ಟ್ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಡಿಕೆಶಿ ಆಸ್ತಿ ವಿವರ ಸಲ್ಲಿಸಿದ್ದಾರೆ. ಡಿಕೆಶಿ ಆಸ್ತಿ ವಿವರದ ಮಾಹಿತಿಯನ್ನು ಐಟಿ ಅಧಿಕಾರಿಗಳು ಕಲೆಹಾಕಿದ್ದಾರೆ. ಕಳೆದ ಐದು ವರ್ಷಗಳ ತೆರಿಗೆ ಪಾವತಿ ವಿವರವನ್ನೂ ಕಲೆ ಹಾಕಲಾಗಿದೆ. ಐಟಿ ಅಧಿಕಾರಿಗಳಿಗೆ ನೀಡಿದ ಮಾಹಿತಿ ಹಾಗೂ ನಾಮಪತ್ರ ಸಲ್ಲಿಕೆ ವೇಳೆ ನೀಡಿದ ಮಾಹಿತಿಯಲ್ಲಿ ವ್ಯತ್ಯಾಸ ಕಾಣುತ್ತಿದ್ದು, ಇದರಿಂದ ನಾಮಪತ್ರ ರಿಜೆಕ್ಟ್ ಆಗುವ ಸಾಧ್ಯತೆ ಇದೆ. ಒಟ್ಟಾರೆ ಇಂದು ಡಿಕೆಶಿ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!