ಬಿಜೆಪಿಯಲ್ಲಿ ಕಾರ್ಯಕರ್ತರಿಲ್ಲದೆ ರೌಡಿಗಳಿಗೆ ಮಣೆ: ಡಿಕೆ.ಶಿವಕುಮಾರ್

ಹೊಸದಿಗಂತ ವರದಿ ಕಲಬುರಗಿ:

ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತರಿಲ್ಲ, ಇರೋ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆಯಲ್ಲಿ, ರೌಡಿಗಳಿಗೆ ಮಣೆ ಹಾಕುತ್ತಿದ್ದಾರೆ.
ಇದರಿಂದ ಬಿಜೆಪಿಯ ಸಂಸ್ಕೃತಿ ಎಂತಹದ್ದು ಎಂಬುದು ಎತ್ತಿ ತೋರಿಸುತ್ತದೆ ಎಂದು ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಬಿಜೆಪಿಗರಿಗೆ ಅಧಿಕಾರ ಕಳೆದುಕೊಳ್ಳುವ ಭಯ ಎದುರಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಆತಂಕದಲ್ಲಿ ಮತಗಳನ್ನು ಕಟ್ ಮಾಡಲು ಮುಂದಾಗಿದೆ. ಇನ್ನೊಂದಡೆ ಗುಂಡಾಗಳಿಗೆ ಮಣೆ ಹಾಕುತ್ತಿದ್ದಾರೆ. ಬಿಜೆಪಿ ಅವರ ಸಂಸ್ಕೃತಿ ಹೊರ ಬರುತ್ತಿದೆ. ದೇಶದಲ್ಲಿ ಕರ್ನಾಟಕಕ್ಕೆ ಇರುವ ಗೌರವನ್ನು ಬಿಜೆಪಿ ಹಾಳು ಮಾಡಿದೆ ಎಂದರು.

ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಆಹ್ವಾನ ಕೊಟ್ಟಿದ್ದೇನೆ. ಬೇಷರತ್ತಾಗಿ ಪಕ್ಷಕ್ಕೆ ಸೇರಿಕೊಳ್ಳಲು ಹಲವರು ಮುಂದೆ ಬಂದಿದ್ದು, ಅವರ ಬಗ್ಗೆ ಹಿರಿಯ ನಾಯಕರ ಗಮನಕ್ಕೆ ತಂದಿದ್ದೇನೆ. ಯಾರು ಪಕ್ಷಕ್ಕೆ ಬಂದರೆ, ಲಾಭ‌ ಆಗಲಿದೆ ಲೆಕ್ಕಾಚಾರದ ಮೇಲೆ ಪಕ್ಷಕ್ಕೆ‌ ಸೇರಿಸಿಕೊಳ್ಳಲಾಗುವದು ಎಂದು ಹೇಳಿದರು.

ಇದೇ ವೇಳೆ ಸಿದ್ದರಾಮಯ್ಯ ಮತ್ತು ನನ್ನ ಮದ್ಯೆ ಯಾವುದೇ ತರಹದ ಗ್ಯಾಪ್ ಇಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!