ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಜೆಪಿಯಿಂದ ಗೆದ್ದ ಶಾಸಕ ಎಸ್.ಟಿ. ಸೋಮಶೇಖರ್ ಕಡೆವರೆಗೂ ನಮ್ಮ ಪಕ್ಷದ ಜೊತೆ ಇದ್ದೇವೆ ಎಂದು ಹೇಳಿದ್ದರು, ತಾಯಿಗೆ ಮೋಸ ಮಾಡೋಕೆ ಆಗೋದಿಲ್ಲ ಎನ್ನುತ್ತಾ ಅಡ್ಡಮತದಾನ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ರೀತಿ ಪಕ್ಷಕ್ಕೆ ಮೋಸ ಮಾಡುವುದು ತಪ್ಪು, ಈಗಾಗಲೇ ವಕೀಲರ ಜೊತೆ ಮಾತನಾಡಿ ಮುಂದಿನ ಕ್ರಮದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಇಂದು ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ. ನಿನ್ನೆವರೆಗೂ ನನಗೆ ಕರೆ ಮಾಡಿ ದ್ರೋಹ ಮಾಡೋದಿಲ್ಲ ಎಂದಿದ್ದರು.
ಡಿಕೆಶಿ, ಸಿದ್ದರಾಮಯ್ಯ ಜೊತೆ ಓಡಾಟ ಮಾಡುವಾಗಲೇ ಯೋಚಿಸಬೇಕಿತ್ತು. ರಾಜೀನಾಮೆ ಕೊಟ್ಟು ಕಾಂಗ್ರೆಸ್ಗೆ ಮತ ಹಾಕಿದ್ದರೆ ಬೇಜಾರಿಲ್ಲ. ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.