ಜೂನ್ 1 ರಿಂದ 200 ಯೂನಿಟ್ ಒಳಗೆ ಕರೆಂಟ್ ಬಿಲ್ ಬಂದರೆ ಕಟ್ಟಬೇಡಿ: ಪ್ರತಾಪ್‌ ಸಿಂಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜೂನ್ 1 ರಿಂದ 200 ಯೂನಿಟ್ ಒಳಗೆ ಕರೆಂಟ್ ಬಿಲ್ ಬಂದರೆ ಬಿಲ್ ಕಟ್ಟಬೇಡಿ. ಹೆಚ್ಚುವರಿಯಾಗಿ ಬಳಸಿದ್ದರೆ ಮಾತ್ರ ಬಿಲ್​ ಪಾವತಿಸಿ, ಅಲ್ಲದೆ ಗ್ಯಾರೆಂಟಿ ಕಾರ್ಡ್ ನಲ್ಲಿ ಕಾಂಗ್ರೆಸ್​ನವರು ಎಲ್ಲಿಯೂ ಷರತ್ತುಗಳು ಅನ್ವಯ ಅಂತ ಹೇಳಿಲ್ಲ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲ ಮನೆಯ ಯಜಮಾನಿಗೆ 2 ಸಾವಿರ ರೂ. ಕೊಡುವುದರ ಜತೆಗೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು. ಜನರು ನಿಮ್ಮ‌ ಮುಖ ನೋಡಿ ಮತ ಹಾಕಿಲ್ಲ. ಗ್ಯಾರಂಟಿ ಕಾರ್ಡ್ ನೋಡಿ ಮತ ನೀಡಿದ್ದಾರೆ ಎಂಬುದನ್ನು ಕಾಂಗ್ರೆಸ್​ ನೆನಪಿಟ್ಟುಕೊಳ್ಳಲಿ ಮತ್ತು ಭರವಸೆಗಳನ್ನು ಈಡೇರಿಸಲಿ ಎಂದರು.

ರಾಜ್ಯ ಸರ್ಕಾರ ಜೂನ್ 1ರೊಳಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಎಡವಿದೆ. ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಪರ ನಿಂತಿದ್ದೇನೆ, ಗ್ಯಾರಂಟಿ ಕಾರ್ಡ್ ನಲ್ಲಿ ಯಾವುದೇ ಷರತ್ತುಗಳ ಅನ್ವಯ ಬಗ್ಗೆ ಉಲ್ಲೇಖಿಸಿಲ್ಲ. ಜೂನ್‌ 1 ರ ವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಷರತ್ತು ವಿಧಿಸಿದರೆ ಜೂನ್ 1 ರಿಂದ ಹೋರಾಟ ಮಾಡುವುದಾಗಿ ತಿಳಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತನ್ನು ಟಾರ್ಗೆಟ್ ಮಾಡುತ್ತಿದೆ. ಕಾರ್ಯಕರ್ತರನ್ನು ಅಪಾಯಕ್ಕೆ ತಳ್ಳಿದಕ್ಕೆ ಕ್ಷಮೆ ಕೇಳುತ್ತೇನೆ. ನಮ್ಮ ಕಾರ್ಯಕರ್ತರು ನಿಜವಾಗಿಯೂ ನೊಂದಿದ್ದಾರೆ. ದೇಶ, ಧರ್ಮ ಅಂತಾ ನಮ್ಮ ಕಾರ್ಯಕರ್ತರು ದುಡಿಯುತ್ತಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!