ಎಕ್ಸಾಂ ಬರಿಯುವವರಿಗೆ ಮಂಗಳಸೂತ್ರ-ಜನಿವಾರ ತೆಗೆಸಬೇಡಿ: ರೈಲ್ವೇ ಇಲಾಖೆಯಿಂದ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೈಲ್ವೇ ನೇಮಕಾತಿ ಪರೀಕ್ಷೆ ವೇಳೆ ಮಂಗಳಸೂತ್ರ ಧರಿಸಿದ್ರೆ ಪರೀಕ್ಷೆಗೆ ಅವಕಾಶವಿಲ್ಲ ಎಂಬ ನಿರ್ಬಂಧವನ್ನು ರೈಲ್ವೆ ಸಚಿವಾಲಯ ವಾಪಸ್ ಪಡೆದಿದೆ. ಈ ಬಗ್ಗೆ ಅಧಿಕೃತ ಆದೇಶ ಕೂಡ ಅಭ್ಯರ್ಥಿಗಳಿಗೆ ಸಿಕ್ಕಿದೆ.

ಜನಿವಾರ ವಿವಾದದಿಂದಾಗಿ ತೀವ್ರ ಟೀಕೆ, ಅಸಮಾಧಾನ ವ್ಯಕ್ತವಾಗಿದ್ದ ಬೆನ್ನಲ್ಲೇ ಈಗ ನಿರ್ಬಂಧ ಸಡಿಲಿಸಲಾಗಿದೆ. ಮಾರ್ಗಸೂಚಿಯಲ್ಲಿ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂದು ಉಲ್ಲೇಖಿಸಲಾಗಿತ್ತು.

ಈ ಬಗ್ಗೆ ಸಂಸದರು, ಶಾಸಕರು ಮನವಿ ಮಾಡಿದ ಹಿನ್ನೆಲೆ ಟ್ವೀಟ್ ಮೂಲಕ ಕೇಂದ್ರ ಸಚಿವ ಸೋಮಣ್ಣ ಗೊಂದಲಕ್ಕೆ ಇತಿಶ್ರೀ ಹಾಡಿದ್ದಾರೆ. ಜನಿವಾರ, ಮಾಂಗಲ್ಯ, ಸಂಸ್ಕೃತಿ ಬಿಂಬಿಸುವ ಯಾವುದೇ ವಸ್ತು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸೂಚಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!