ಕರ್ನಾಟಕವನ್ನು ಇಸ್ಲಾಮಿಕ್ ರಾಷ್ಟ್ರ ಅಂದ್ಕೊಂಡಿದ್ದೀರಾ?: ಸಿಎಂ ವಿರುದ್ಧ ಜೋಶಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಕರ್ನಾಟಕವನ್ನು ಪಾಕಿಸ್ತಾನ​ಗಿಂತ ಕಡೆ ಮಾಡಿದ್ದಾರೆ ಹನುಮಾನ್ ಚಾಲೀಸ್ ಪಠಣೆ ಮಾಡಿದವರ ಮೇಲೆ ಎಫ್​ಐಆರ್​ ಹಾಕುತ್ತೀರಿ. ಇದು ತುಷ್ಟೀಕರಣದ ಪರಾಕಾಷ್ಠೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರು ಬೇಕಾದರೂ ಬೆಳಗ್ಗೆ 6 ಗಂಟೆಗೆ ಎದ್ದು ನಮಾಜ್ ಮಾಡಬಹುದು. ನೀವು ಕರ್ನಾಟಕವನ್ನು ಆಳುತ್ತೀರಾ ಅಥವಾ ಇಸ್ಲಾಮಿಕ್ ದೇಶವೆಂದು ಪರಿಗಣಿಸುತ್ತೀರಾ? ಸಿಎಂ ಸಿದ್ದರಾಮಯ್ಯನವರ ಕ್ರಮವನ್ನು ಖಂಡಿಸುತ್ತೇನೆ. ಇದು ವೋಟ್ ಬ್ಯಾಂಕ್ ರಾಜಕಾರಣ ಎಂದರು.

ನನ್ನ ಮಕ್ಕಳು ರಾಹುಲ್​ ಗಾಂಧಿ ತರ ಆಗಬೇಕೆಂಬ ಸಚಿವ ಸಂತೋಷ್​ ಲಾಡ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಅವರು ಹಾಗೆ ಹೇಳದೆ ಹೋದರೇ ನೌಕರಿ ಹೋಗುತ್ತೆ. ಕಾಂಗ್ರೆಸ್​ನವರು ಮೋಸಗಾರರು. ಸುಳ್ಳು ಹೇಳಿ ರಾಹುಲ್ ಗಾಂಧಿ ಫಾರಿನ್​ಗೆ ಹೋಗುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!