ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರ್ನಾಟಕವನ್ನು ಪಾಕಿಸ್ತಾನಗಿಂತ ಕಡೆ ಮಾಡಿದ್ದಾರೆ ಹನುಮಾನ್ ಚಾಲೀಸ್ ಪಠಣೆ ಮಾಡಿದವರ ಮೇಲೆ ಎಫ್ಐಆರ್ ಹಾಕುತ್ತೀರಿ. ಇದು ತುಷ್ಟೀಕರಣದ ಪರಾಕಾಷ್ಠೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರು ಬೇಕಾದರೂ ಬೆಳಗ್ಗೆ 6 ಗಂಟೆಗೆ ಎದ್ದು ನಮಾಜ್ ಮಾಡಬಹುದು. ನೀವು ಕರ್ನಾಟಕವನ್ನು ಆಳುತ್ತೀರಾ ಅಥವಾ ಇಸ್ಲಾಮಿಕ್ ದೇಶವೆಂದು ಪರಿಗಣಿಸುತ್ತೀರಾ? ಸಿಎಂ ಸಿದ್ದರಾಮಯ್ಯನವರ ಕ್ರಮವನ್ನು ಖಂಡಿಸುತ್ತೇನೆ. ಇದು ವೋಟ್ ಬ್ಯಾಂಕ್ ರಾಜಕಾರಣ ಎಂದರು.
ನನ್ನ ಮಕ್ಕಳು ರಾಹುಲ್ ಗಾಂಧಿ ತರ ಆಗಬೇಕೆಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಅವರು ಹಾಗೆ ಹೇಳದೆ ಹೋದರೇ ನೌಕರಿ ಹೋಗುತ್ತೆ. ಕಾಂಗ್ರೆಸ್ನವರು ಮೋಸಗಾರರು. ಸುಳ್ಳು ಹೇಳಿ ರಾಹುಲ್ ಗಾಂಧಿ ಫಾರಿನ್ಗೆ ಹೋಗುತ್ತಾರೆ ಎಂದು ಕಿಡಿ ಕಾರಿದ್ದಾರೆ.