ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಹನುಮಂತ ಬಿಗ್ ಬಾಸ್ ತಂಡದ ಸುದ್ದಿಗೋಷ್ಟಿಯಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.
ನನ್ನ ಗೆಲುವಿಗೆ ಕರ್ನಾಟಕದ ಜನತೆ ಕಾರಣ ಎಂದು ಖುಷಿಯಿಂದ ಮಾತನಾಡಿದ್ದಾರೆ. ಈ ವೇಳೆ, ಗೆದ್ದ 50 ಲಕ್ಷ ಏನು ಮಾಡ್ತಾರೆ ಎಂಬುದನ್ನು ವಿವರಿಸಿದ್ದಾರೆ.
‘ಬಿಗ್ ಬಾಸ್’ ಶೋ ಗೆದ್ದ 50 ಲಕ್ಷ ರೂ.ನಲ್ಲಿ ಮನೆ ಕಟ್ಟಿಸುತ್ತೇನೆ. ಜೊತೆ ಮದುವೆ ಆಗುತ್ತೇನೆ. ನಮಗೆ ತಗಡಿನ ಮನೆಯಿದೆ ಅದನ್ನು ತೆಗೆಯಿಸಿ, ಸ್ಲ್ಯಾಬ್ ಮನೆ ಕಟ್ಟಿಸುತ್ತೇನೆ ಎಂದು ಹನುಮಂತ ಮಾತನಾಡಿದ್ದಾರೆ.
ಬರೋದು ಬಂದು ಬಿಟ್ಟಿದ್ದೇ, ಏನಾದರೂ ಆಗಲಿ ಅಂತ ನಿಂತುಬಿಟ್ಟಿದ್ದೆ. ಬರುವಾಗ ಬಂದೇ ಖಾಲಿ, ಹೋಗುವಾಗ ಖಾಲಿ, ಇರೋ ಮಟ ಜಾಲಿ ಜಾಲಿ ಎಂದು ಸುದ್ದಿಗೋಷ್ಠಿಯಲ್ಲಿ ಹನುಮಂತ ಹಾಡಿದ್ದಾರೆ. ಈ ಮೂಲಕ ಗೆಲುವಿಗಾಗಿ ತಾವು ಯಾವುದೇ ಪ್ಲ್ಯಾನ್ ಮಾಡಿರಲಿಲ್ಲ. ನಾನು ಹೇಗೆ ಇದ್ದೆನೋ ಹಾಗೇ ಆಡಿದ್ದೇನೆ ಎಂದಿದ್ದಾರೆ.
ಇದರ ನಡುವೆ ಸಂಗಾತಿ ಬಗ್ಗೆ ಮಾತನಾಡಿದ ಹನುಮಂತ, ನಾನು ಬಿಗ್ ಬಾಸ್ ಗೆದ್ದಿರೋದು ನೋಡಿ ಬಹಳ ಖುಷಿಪಟ್ಟಳು. ನಮ್ ಹುಡುಗಿ ಅಳಾಕತ್ತಿದ್ಲು ನಾನೇ ಸಮಾಧಾನ ಮಾಡಿದೆ ಎಂದರು. ಆಗ ತ್ರಿವಿಕ್ರಮ್ ಮಾತನಾಡಿ ಕಾಸು ತಂದಿದ್ದೀನಿ, ಮದುವೆಯಾಗುತ್ತೀನಿ. ತಲೆ ಕೆಡಿಸಿಕೊಳ್ಳಬೇಡ ಅಂತ ಹನುಮಂತಗೆ ಕಾಲೆಳೆದಿದ್ದಾರೆ. ಹುಡುಗಿಯ ಬಗ್ಗೆ ಮಾತನಾಡಿತ್ತೊದ್ದಂತೆ ಅವರು ನಾಚಿ ನೀರಾಗಿದ್ದಾರೆ.