ಆ ಒಂದು ಮಾತು ಬಣ ಬಡಿದಾಟಕ್ಕೆ ಬ್ರೇಕ್ ಕೊಡ್ತಾ? ಯತ್ನಾಳ್ ಸೈಲೆಂಟ್​ ಆಗಿದ್ದೇಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದ ಯತ್ನಾಳ್​ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್​ ನೀಡಿದೆ. ಇದರ ಬೆನ್ನಲ್ಲೇ ಯತ್ನಾಳ್, ಇಂದು ನವದೆಹಲಿಯಲ್ಲಿ ಶಿಸ್ತು ಸಮಿತಿ ಮುಂದೆ ಹಾಜರಾಗಿ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳನ್ನು ಬಿಚ್ಚಿಟ್ಟಿದ್ದಾರೆ.

ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಅತ್ತ ದೆಹಲಿಯಲ್ಲಿ ಯತ್ನಾಳ್​, ಬಿಎಸ್​​ವೈ ಮಾತನ್ನು ಸ್ವಾಗತಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ. ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ ಎಂದರು. ಈ ಮೂಲಕ ಬಿಎಸ್​ವೈ ಪರೋಕ್ಷವಾಗಿ ಯತ್ನಾಳ್ ದಾರಿಗೆ ಬರಲಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!