ಹೊಸದಿಗಂತ ವರದಿ ಮಡಿಕೇರಿ:
ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಸರ್ಕಾರ ರೂ. 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಿದೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧಿಕೃತ ಕಚೇರಿಯಲ್ಲಿ ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ. ಬೋಪಯ್ಯ ಅವರು ದಸರಾ ಅನುದಾನಕ್ಕೆ ಸಲ್ಲಿಸಿದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಯವರು ಅನುದಾನ ಬಿಡುಗಡೆ ಮಾಡಿದ್ದಾರೆ.
ಈ ಸಂದರ್ಭ ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ದಸರಾ ಸಮಿತಿ ಗೌರವಾಧ್ಯಕ್ಷ ಸಿ.ಕೆ. ಬೋಪಣ್ಣ ಮತ್ತು ಬಿ.ಎನ್. ಪ್ರಕಾಶ್, ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ಜಿಮ್ಮ ಸುಬ್ಬಯ್ಯ, ಪಾಪು ರವೀಂದ್ರ ಹಾಜರಿದ್ದರು.