ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗಳಿಗೆ ನಂಬಿ ಮೋಸ ಹೋಗಬೇಡಿ: ತೆಲಂಗಾಣ ಜನತೆ ಯಡಿಯೂರಪ್ಪ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ಕರ್ನಾಟಕದಲ್ಲಿ ಉಚಿತಗಳನ್ನು ಘೋಷಿಸಿ ಜಾರಿ ಮಾಡಲಾಗದೇ ಮೋಸ ಮಾಡಿದ ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗಳಿಗೆ ತೆಲಂಗಾಣದ ಜನತೆ ಮರುಳಾಗಬಾರದು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಬಂದಿರುವ ಅವರು ಹೈದರಾಬಾದ್‌ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಕಾಂಗ್ರೆಸ್ ನೀಡಿದ 5 ಭರವಸೆಗಳು ಕರ್ನಾಟಕದಲ್ಲಿ ಜಾರಿಯಾಗಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ತೆಲಂಗಾಣದ ಜನರನ್ನೂ ಆ ಪಕ್ಷ ಇದೇ ರೀತಿಯ ಮೋಸದ ಜಾಲಕ್ಕೆ ಬೀಳಿಸಲಿದೆ ಎಂದು ಎಚ್ಚರಿಸಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕರ್ನಾಟಕದ ಜನರನ್ನು ವಂಚಿಸುತ್ತಿದೆ. ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಸುಳ್ಳು ಭರವಸೆ ನೀಡಿ ಕರ್ನಾಟಕದ ಜನತೆಗೆ ಕಾಂಗ್ರೆಸ್​ ಮೋಸ ಮಾಡಿದೆ. ತೆಲಂಗಾಣದಲ್ಲೂ ಹೊಸ ನಾಟಕ ಆರಂಭಿಸಿದೆ. ತೆಲಂಗಾಣ ಜನತೆ ನಂಬಿ ಮೋಸ ಹೋಗಬೇಡಿ ಎಂದು ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!