ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಬ್ಬರು ಉನ್ನತಾ ಮಹಿಳಾ ಅಧಿಕಾರಿಗಳು ಬಹಿರಾಂಗವಾಗಿ ಕಿತ್ತಾಡಿಕೊಂಡಿದ್ದು, ಸರ್ಕಾರಕ್ಕೆ ಇದರಿಂದ ಮುಜುಗರವಾಗಿದೆ.
ಈ ರೀತಿ ಬಹಿರಂಗವಾಗಿ ಕಿತ್ತಾಡುವುದನ್ನು ಈ ಕೂಡಲೇ ನಿಲ್ಲಿಸಿ ಎಂದು ಆದೇಶಿಸಿದೆ. ವಿಧಾನಮಂಡಲ ಅಧಿವೇಶನದ ಬಗ್ಗೆ ಕಾಳಜಿ ವಹಿಸಿದ್ದರೂ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಐಪಿಎಸ್ ಅಧಿಕಾರಿ ರೂಪ ಡಿ. ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿವರಣೆ ಕೇಳಲು ಸಮನ್ಸ್ ಮಾಡಿದ್ದಾರೆ. ಮಾಧ್ಯಮಗಳ ಮುಂದೆ ನಿಂತು ಎಲ್ಲರೂ ಬಹಿರಂಗವಾಗಿ ಮಾತನಾಡುತ್ತಿದ್ದಾರೆ, ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಎಂದು ಹೇಳಲಾಗಿದೆ.