ಹಿಂದುತ್ವ ತಿಳಿಯಲು ಗೂಗಲ್ ನೋಡಬೇಡಿ, ಧ್ಯಾನದಿಂದ ಅಧ್ಯಯನ ಮಾಡಿ: ಅರುಣ್ ಸಿಂಗ್ ಟಾಂಗ್

ಹೊಸದಿಗಂತ ವರದಿ ವಿಜಯಪುರ:

ಹಿಂದುತ್ವ ತಿಳಿಯಲು ಗೂಗಲ್ ನೋಡಬೇಡಿ, ಧ್ಯಾನದಿಂದ ಅಧ್ಯಯನ ಮಾಡಿ ಎಂದು ಶಾಸಕ ಸತೀಶ ಜಾರಕಿಹೊಳಿಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟಾಂಗ್ ನೀಡಿದರು.

ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಪದೇ ಪದೇ ಹಿಂದುತ್ವದ ಬಗ್ಗೆ ಯಾಕೆ ಅಪಮಾನ ಮಾಡುತ್ತಿದ್ದಾರೋ ಗೊತ್ತಿಲ್ಲ. ದೇಶದಲ್ಲಿ ಕಾಂಗ್ರೆಸ್ ಸರ್ವನಾಶವಾಗುತ್ತಿದ್ದು, ಇದೀಗ ಸತೀಶ ಜಾರಕಿಹೊಳಿ ಹೇಳಿಕೆ ವಿನಾಶ ಕಾಲೇ ವಿಪರೀತ ಬುದ್ದಿ ಎನ್ನುವಂತಾಗಿದೆ ಎಂದರು.

ಹಿಂದೂ ಎಂಬುದು ನಮ್ಮ ಸಂಸ್ಕೃತಿ. ಅದರ ಬಗ್ಗೆ ನಮಗೆ ಗರ್ವ ಇದೆ. ಇಡೀ ದೇಶವಾಸಿಗಳ ಗರ್ವವಾಗಿದೆ. ಕಾಂಗ್ರೆಸ್ ನಾಯಕರು ಪದೇ ಪದೇ ಹಿಂದುತ್ವದ ಬಗ್ಗೆ ಯಾಕೆ ಅಪಮಾನ ಮಾಡುತ್ತಿದ್ದಾರೆ ತಿಳಿಯುತ್ತಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!