RCB | ಈ ಬಾರಿ ಕಪ್‌ ನಮ್ದೆ ಅಂತ ಮಾತ್ರ ಹೇಳ್ಬೇಡಿ ಎಂದ ಅನಿಲ್‌ ಕುಂಬ್ಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿ ಕಪ್‌ ನಮ್ದೇ ಅಂತ ಮಾತ್ರ ಹೇಳ್ಬೇಡಿ, ಆ ರೀತಿ ಹೇಳಿದಾಗ ಕಪ್‌ ಗೆಲ್ಲೋಕೆ ಆಗೋದಿಲ್ಲ ಎಂದು ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ತಮಾಷೆಯಾಗಿ ಹೇಳಿದ್ದಾರೆ.

ಅವರು ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರಿಗೆ ಆರ್​ಸಿಬಿ ಬಗ್ಗೆ ಹಾಗೂ ಆರ್​ಸಿಬಿ ಈ ಬಾರಿಯಾದರೂ ಕಪ್ ಎತ್ತುತ್ತಾ ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ಫನ್ ಆಗಿ ಉತ್ತರಿಸಿದ್ದಾರೆ. ನಾವು ಈ ಸೀಸನ್​ನಲ್ಲಿ ಇನ್ನೂ ಬೆಂಗಳೂರಲ್ಲಿ ಗೆದ್ದಿಲ್ಲ. ಕಪ್ ಎತ್ತುತ್ತೇವೆ ಎನ್ನಬೇಡಿ. ಹಾಗೆ ಹೇಳಿದಾಗಲೇ ನಾವು ಕಪ್ ಎತ್ತಿಲ್ಲ. ಐಪಿಎಲ್ ಚೆನ್ನಾಗಿ ನಡೆದುಕೊಂಡು ಬಂದಿದೆ ಎಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!