ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ(Tamil nadu) ಕಳೆದ ಒಂಬತ್ತು ವರ್ಷಗಳಲ್ಲಿ ಕೇಂದ್ರ ಸರಕಾರ ಮಾಡಿರುವ ಸಾಧನೆಗಳನ್ನು ಪಟ್ಟಿ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆಗ ಸವಾಲೆಸಿದಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ (K Annamalai) ಸೋಮವಾರ ಸ್ಟಾಲಿನ್ ತಿರುಗೇಟು ನೀಡಿದ್ದಾರೆ.
ಸುದೀರ್ಘ ಟ್ವೀಟ್ ಮಾಡಿದ ಅಣ್ಣಾಮಲೈ ನೀವು ಈ ಸ್ಥಾನದಲ್ಲಿರಲು ಕಾರಣ ವಂಶಾಡಳಿತ ರಾಜಕಾರಣ. ದಯವಿಟ್ಟು ನಮಗೆ ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡಬೇಡಿ ಎಂದಿದ್ದಾರೆ.
ಅಮಿತ್ ಶಾ ಚೆನ್ನೈ ಭೇಟಿಗೆ ಒಂದು ದಿನ ಮೊದಲು ಎಂಕೆ ಸ್ಟಾಲಿನ್ , ಕಳೆದ ಎರಡು ದಿನಗಳಿಂದ ಕೇಂದ್ರ ಗೃಹ ಸಚಿವರು ಚೆನ್ನೈಗೆ ಬರುತ್ತಿದ್ದಾರೆ ಎಂದು ಪತ್ರಿಕೆಗಳಲ್ಲಿ ಓದುತ್ತಿದ್ದೆ. ಇದೆಲ್ಲವೂ 2024ರ ಚುನಾವಣೆಗೆ ಅವರ ತಯಾರಿಯ ಭಾಗವಾಗಿದೆ. ಆದಾಗ್ಯೂ, ಕಳೆದ ಒಂಬತ್ತು ವರ್ಷಗಳಲ್ಲಿ ತಮಿಳುನಾಡಿಗೆ ಅನುಕೂಲವಾಗುವಂತೆ ಕೇಂದ್ರವು ಮಾಡಿರುವ ಕೆಲಸಗಳ ಪಟ್ಟಿಯನ್ನು ಅವರು ನನಗೆ ನೀಡಬಹುದೇ ಎಂದು ನಾನು ಕೇಳಲು ಬಯಸುತ್ತೇನೆ ಎಂದಿದ್ದರು.
ತಮಿಳುನಾಡಿನಲ್ಲಿ ಬಿಜೆಪಿ ಹಿಂದಿ ಮತ್ತು ಸಂಸ್ಕೃತವನ್ನು ಹೇರುತ್ತಿದೆ, ತಮಿಳು ಭಾಷೆಯನ್ನು ನಿರ್ಲಕ್ಷಿಸಿದೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET) ಜಾರಿಗೆ ತಂದಿದೆ ಎಂದು ಆರೋಪಿಸಿದ ಅವರು ಇದು ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಕೆ ಅಣ್ಣಾಮಲೈ, ನಿಮ್ಮ ಪಕ್ಷವು ತಮಿಳು ಭಾಷೆ ಮತ್ತು ಸಂಸ್ಕೃತಿ ಎಂದಿಗೂ ತಮಿಳುನಾಡಿನ ಗಡಿಯನ್ನು ದಾಟದಂತೆ ನೋಡಿಕೊಂಡಿದೆ. ಇದು ವಿಶ್ವದ ಅತ್ಯಂತ ಹಳೆಯ ಭಾಷೆಯಾದ ನಮ್ಮ ತಮಿಳಿಗೆ ಅತ್ಯಂತ ದೊಡ್ಡ ಅಪಚಾರ ಎಂದು ನಾವು ನಂಬುತ್ತೇವೆ .ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಇಡೀ ಜಗತ್ತಿನಾದ್ಯಂತ ಕೊಂಡೊಯ್ದಿದ್ದಾರೆ. ಕೊನೆಗೂ ನಮ್ಮ ಭಾಷೆಯು ನಿಜವಾಗಿಯೂ ಅರ್ಹವಾದ ಗಮನ ಮತ್ತು ಶ್ರೀಮಂತಿಕೆಯನ್ನು ಪಡೆಯುತ್ತಿದೆ. ಯಾರಾದರೂ ‘ತಮಿಳು’ ಬಗ್ಗೆ ಹೇಳುವುದಾದರೆ, ‘ವಿದೇಶಿ ಹೆಸರು’ ಇಟ್ಟುಕೊಂಡು ತಮಿಳಿನ ಬಗ್ಗೆ ಮಾತನಾಡುವ ಕೊನೆಯ ವ್ಯಕ್ತಿ ನೀವೇ ಆಗಿರುತ್ತೀರಿ ಎಂದು ತಿರುಗೇಟು ಕೊಟ್ಟಿದ್ದಾರೆ.
ಇದೇ ವೇಳೆ ತಮಿಳುನಾಡಿನ ವಂಶಾಡಳಿತದ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದ ಅಣ್ಣಾಮಲೈ, ‘ರಾಜವಂಶ’ ಎಂಬ ಪದ ಮತ್ತು ನಿಮ್ಮ ಉಪನಾಮ ‘ಕರುಣಾನಿಧಿ’ಯಿಂದಾಗಿ ನೀವು ಈ ಸ್ಥಾನದಲ್ಲಿದ್ದೀರಿ. ದಯವಿಟ್ಟು ನಮಗೆ ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡಬೇಡಿ. ನಿಮ್ಮ ಅರಿವಾಲಯಂ ಪಾರ್ಟಿಯಲ್ಲಿರಬೇಕಾದರೆ ನಿಮ್ಮ ಗೋಪಾಲಪುರಂನ ಮನೆಯಲ್ಲಿ ಹುಟ್ಟಬೇಕು ಎಂಬುದು ಮೂಲಭೂತ ಮಾನದಂಡವಾಗಿದೆ.ಅದಕ್ಕಾಗಿಯೇ ಗೌರವಾನ್ವಿತ ಗೃಹ ಸಚಿವರು ಅವರು ನಿಮ್ಮ ಕುಟುಂಬವನ್ನು 3G (3 ತಲೆಮಾರಿನ ರಾಜವಂಶ) ಮತ್ತು ನಿಮ್ಮ ಪಾಲುದಾರ ಕಾಂಗ್ರೆಸ್ನ್ನು 4G (4 ತಲೆಮಾರಿನ ರಾಜವಂಶ) ಎಂದು ಹೇಳಿರುವುದು ಚಾಟಿ ಬೀಸಿದರು .