ಯಾವುದೇ ಕಾರಣಕ್ಕೂ ಅಭಿಮಾನದ ಹೆಸರಲ್ಲಿ ಜೀವ ಕಳೆದುಕೊಳ್ಳಬೇಡಿ: ಯಶ್ ಭಾವುಕ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಸೂರಣಗಿ ಗ್ರಾಮದಲ್ಲಿ ಮೃತ ಅಭಿಮಾನಿಗಳ ಕುಟುಂಬದವರನ್ನು ಭೇಟಿ ಮಾಡಿ ಅವರನ್ನು ಸಂತೈಸಿದ ನಟ ಯಶ್, ಯಾವುದೇ ಕಾರಣಕ್ಕೂ ಅಭಿಮಾನದ ಹೆಸರಲ್ಲಿ ಜೀವ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

ಇದೇ ವೇಳೆ, ಇನ್ಮುಂದೆ ನನ್ನ ಬ್ಯಾನರ್ ಎಲ್ಲೂ ಕಟ್ಟಬೇಡಿ, ಎಲ್ಲಿಯೂ ಕಟೌಟ್ ಹಾಕಬೇಡಿ ಎಂದು ಫ್ಯಾನ್ಸ್‌ಗೆ ಯಶ್ ಮನವಿ ಮಾಡಿದ್ದಾರೆ.

ನಿಮ್ಮೊಂದಿಗೆ ನಾನು ಇದ್ದೇನೆ. ಯಾವುದೇ ಕಾರಣಕ್ಕೂ ಆತಂಕ ಬೇಡ ಎಂದಿದ್ದಾರೆ. ಈ ದುರ್ಘಟನೆ ಆಗಬಾರದಿದ್ದು, ನನಗೂ ತುಂಬಾ ದುಃಖ ಆಗಿದೆ ಎಂದು ಯಶ್ ಹೇಳಿದ್ದಾರೆ. ಇನ್ಮುಂದೆ ನನ್ನ ಬ್ಯಾನರ್ ಕಟ್ಟ ಬೇಡಿ, ಎಲ್ಲಿಯೂ ಕಟೌಟ್‌ಗಳನ್ನು ಹಾಕಬೇಡಿ ಎಂದು ಯಶ್ ಕೋರಿಕೆಯೊಂದನ್ನ ಮುಂದಿಟ್ಟಿದ್ದಾರೆ.

ನಿಮ್ಮ ಪ್ರೀತಿಗೆ ನಾನು ಸದಾ ಆಭಾರಿಯಾಗಿದ್ದೇನೆ. ಈ ಘಟನೆಯಿಂದ ನನಗೆ ತುಂಬಾ ಬೇಸರವಾಗಿದೆ. ಅಭಿಮಾನಿಗಳ ಅಭಿಮಾನ ಮತ್ತು ನನ್ನ ಕೆಲಸದಿಂದ ಬದುಕು ರೂಪಿಸಿಕೊಂಡಿದ್ದೇನೆ. ಕಲಾವಿದರ ಮೇಲೆ ಅಭಿಮಾನ ಇರಲಿ ಆದರೆ ಈ ರೀತಿಯ ಅಭಿಮಾನ ಬೇಡ ಎಂದು ಯಶ್ ಮಾತನಾಡಿದ್ದಾರೆ.

ಅಭಿಮಾನಿಗಳು ಅಭಿಮಾನದ ಜೊತೆ ಅವರ ಬದುಕು ರೂಪಿಸಿಕೊಂಡರೆ ನನಗೆ ಸಂತೋಷ. ಈ ಘಟನೆಯಿಂದಾಗಿ ನಾನು ಜನ್ಮದಿನ ಅಚರಣೆ ಮಾಡಬಾರದೆಂದು ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಜನ್ಮದಿನವೆಂದರೆ ನನಗೆ ಭಯವಾಗುತ್ತಿದೆ ಎಂದರು.

ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!