ಬಿಜೆಪಿ ನಾಯಕರ ಸ್ವಾರ್ಥಕ್ಕಾಗಿ ಕರ್ನಾಟಕವನ್ನು ಬಲಿ ಕೊಡಬೇಡಿ: ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಚುನಾವನಾವೂ ಅಖಾಡಕ್ಕೆ ಇಂದು ಕಾಂಗ್ರೆಸ್​ ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ಇಳಿದಿದ್ದು, ಹುಬ್ಬಳ್ಳಿಗೆ ಎಂಟ್ರಿ ನೀಡಿದ ಸೋನಿಯಾ ಗಾಂಧಿ ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದರು.

ಬಿಜೆಪಿಯವರು ದರೋಡೆಯನ್ನೇ ದಂಧೆಯಾಗಿ ಮಾಡಿಕೊಂಡಿದ್ದಾರೆ. ಬಿಜೆಪಿ ನಾಯಕರ ಸ್ವಾರ್ಥಕ್ಕಾಗಿ ಕರ್ನಾಟಕವನ್ನು ಬಲಿ ಕೊಡಬೇಡಿ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

40 ಪರ್ಸೆಂಟ್ ಸರ್ಕಾರ ಕರ್ನಾಟಕದ ಜನರನ್ನು ಲೂಟಿ ಮಾಡುತ್ತಿದೆ. ಬಿಜೆಪಿ ಸೋತರೆ ಜಗಳವಾಗುತ್ತೆ ಅಂತಾರೆ, ಧಮ್ಕಿ ಹಾಕುತ್ತಾರೆ. ಕರ್ನಾಟಕಕ್ಕೆ ಪ್ರಧಾನಿ ಮೋದಿ ಆಶೀರ್ವಾದ ಸಿಗಲ್ಲ ಅಂತಾರೆ ಎಂದರು.

ಕರ್ನಾಟಕದ ಜನರನ್ನು ಇಷ್ಟೊಂದು ಕೇವಲವಾಗಿ ಭಾವಿಸಬೇಡಿ. ಕರ್ನಾಟಕದ ಜನರು ಯಾರದೋ ಆಶೀರ್ವಾದವನ್ನು ಬಯಸಲ್ಲ. ಕರ್ನಾಟಕದ ಜನರಿಗೆ ತಮ್ಮ ಶಕ್ತಿ, ಪರಿಶ್ರಮದ ಮೇಲೆ ವಿಶ್ವಾಸವಿದೆ. ರಾಜ್ಯದ ಜನ ಯಾರಿಗೂ ಹೆದರಲ್ಲ, ಎಲೆಕ್ಷನ್‌ನಲ್ಲಿ ತಕ್ಕ ಪಾಠ ಕಲಿಸುತ್ತಾರೆ. ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿದ್ದಾರೆ. ಕೇಂದ್ರದ ದಮನಕಾರಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬಳ್ಳಾರಿಯ ಜನರು ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದ್ದಾರೆ. ಬಿಜೆಪಿಯವರು ದ್ವೇಷ ಹುಟ್ಟುಹಾಕುತ್ತಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಮಾಡಲಾಗಿದೆ. ಈ ಯಾತ್ರೆಯಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದರು.

ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಬಿಜೆಪಿಯವರು ಸಂವಿಧಾನ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ನನ್ನ ಮಗ ರಾಹುಲ್ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಕರ್ನಾಟಕದಲ್ಲಿ ಅಭಿವೃದ್ಧಿ ಮಾಡಿಲ್ಲ. ಸಾಮಾಜಿಕ ನ್ಯಾಯ ನೀಡುವುದಕ್ಕಾಗಿ ಕಾಂಗ್ರೆಸ್​ನ್ನು ಬೆಂಬಲಿಸಿ. ಈ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತವನ್ನು ನೀಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.

ಬಿಜೆಪಿ ಕರ್ನಾಟಕವನ್ನು ಲೂಟಿ ಮಾಡುತ್ತಿದೆ. ಭ್ರಷ್ಟ ಬಿಜೆಪಿ ಸರ್ಕಾರದಿಂದ ಕರ್ನಾಟಕವನ್ನು ಉಳಿಸಬೇಕಿದೆ. ಮೇ 10ರಂದು ಪ್ರತಿಯೊಬ್ಬರೂ ಕಾಂಗ್ರೆಸ್​ಗೆ ವೋಟ್ ಮಾಡಿ ಎಂದು ಸೋನಿಯಾ ಗಾಂಧಿ ಮನವಿ ಮಾಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!