ಜಾತಿಗಣತಿ ವರದಿ ಕುರಿತು ಉಹಾಪೋಹ ಬೇಡ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾತಿಗಣತಿ ವರದಿ ಕುರಿತು ಉಹಾಪೋಹ ಬೇಡ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದು ಹೇಳುವ ಮೂಲಕ ಬಿಜೆಪಿ ನಾಯಕರು ರಾಜ್ಯದ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಜಾತಿ ಗಣತಿ ಅಧ್ಯಯನ ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗಲೇ ಬಿಜೆಪಿಯವರೇ ಜಾತಿಗಣತಿಯನ್ನು ತಿರಸ್ಕರಿಸಬಹುದಿತ್ತು. ಆದರೀಗ ಬಿಜೆಪಿ ನಾಯಕರು ಜಾತಿಗಣತಿಯನ್ನು ಅವೈಜ್ಞಾನಿಕ ಎಂದು ಹೇಳುತ್ತಿರುವುದು ಸರಿಯಲ್ಲ ಎಂದರು.

ಜಾತಿ ಗಣತಿ ವರದಿ ಇನ್ನೂ ಚರ್ಚೆಯ ಹಂತದಲ್ಲಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆಯಷ್ಟೇ ಆಗಿದೆ. ಇದರ ಬಗ್ಗೆ ಇನ್ನಷ್ಟು ಚರ್ಚೆ ಆಗಬೇಕಿದೆ ಅಲ್ಲಿಯವರೆಗೆ ನಾನು ಏನು ಹೇಳುವುದಿಲ್ಲ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!