ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಲೆಬ್ರಿಟಿಗಳು ಅಂದ ತಕ್ಷಣ ನಾವ್ಯಾರು ದೇವರಲ್ಲ, ದೇವರೂ ಅಂತಲೂ ಭಾವಿಸಬೇಡಿ ಎಂದು ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ವಿಚಾರ ಕುರಿತುಪ್ರತಿಕ್ರಿಯಿಸಿದ್ದಾರೆ.
ನಾನು ಮನೆಯಲ್ಲಿ ಸಣ್ಣಪುಟ್ಟ ತಪ್ಪುಗಳನ್ನು ಮಾಡಿ ಬೈಸಿಕೊಳ್ತೀನಿ. ಸೆಲೆಬ್ರಿಟಿ ಅಂದ ಮಾತ್ರಕ್ಕೆ ನಾವ್ಯಾರೂ ದೇವರಲ್ಲ. ಅಭಿಮಾನಿಗಳು ಆ ರೀತಿ ಭಾವಿಸಬೇಡಿ. ನಾವು ಮಾಡೋದೆಲ್ಲ ಸರಿನೇ ಮಾಡಬೇಕು ಅನ್ನೋ ಒತ್ತಡವನ್ನೂ ಹಾಕಬೇಡಿ. ಏಕೆಂದರೆ ತಪ್ಪು ಮಾಡೋನೆ ಮನುಷ್ಯ, ಫ್ಲಾಪ್ಗಳನ್ನ ಕೊಡೋನೇ ಹೀರೋ ಅಂತ ಹೇಳಿದ್ದಾರೆ.
ಇಂದು ಒಂದಿಲ್ಲೊಂದು ವಿಚಾರಗಳಿಗೆ ಚಿತ್ರರಂಗದ ಹೆಸರು ಬರುತ್ತಿದೆ. ಜನ ಬರ್ತಿಲ್ಲ ಅಂದ್ರೆ ಚಿತ್ರರಂಗ, ಸಿನಿಮಾ ಚೆನ್ನಾಗಿಲ್ಲ ಅಂದ್ರೆ ಚಿತ್ರರಂಗ, ಏನೇ ವಿಷಯ ನಡೆದರೂ ಚಿತ್ರರಂಗ ಅಂತಾರೆ. ಹಾಗಾಗಿ ಚಿತ್ರರಂಗಕ್ಕೆ ಕ್ಲಿನ್ ಚಿಟ್ ಸಿಗ್ಬೇಕು. ತಪ್ಪತಸ್ಥರಿಗೆ ಶಿಕ್ಷೆ ಆಗ್ಬೇಕು ಅಂತಾ ಹೇಳಿದ್ದಾರೆ.