ಬಿಜೆಪಿ ಪರ ಕೆಲಸ‌ ಮಾಡುವ ಕಾಂಗ್ರೆಸ್-ಸಿಪಿಎಂಗೆ ವೋಟ್ ಹಾಕಬೇಡಿ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂಡಿಯಾ ಮೈತ್ರಿಕೂಟ ರಚನೆ ಆಗಲು ನಾನೇ ಕಾರಣ. ಇಂಡಿಯಾ (INDIA) ಎಂದು ಮೈತ್ರಿಕೂಟಕ್ಕೆ ಹೆಸರು ಸೂಚಿಸಿದ್ದೇ ನಾನು. ಆದ್ರೆ ದೇಶದಲ್ಲಿರುವ ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳದಲ್ಲಿಲ್ಲ, ಕಾಂಗ್ರೆಸ್ ಮತ್ತು ಸಿಪಿಎಂ ಬಿಜೆಪಿ ಪರವಾಗಿ ಕೆಲಸ‌ ಮಾಡುತ್ತಿವೆ. ನೀವೂ ಬಿಜೆಪಿ ಸೋಲಿಸಬೇಕಾದರೆ ಟಿಎಂಸಿಗೆ ಮತ‌ ನೀಡಬೇಕು ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮುರ್ಷಿದಾಬಾದ್‌ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಂಗಾಳದಲ್ಲಿ TMC ಯಾರ ಜೊತೆಗೂ ಮೈತ್ರಿ ಮಾಡಿಕೊಂಡಿಲ್ಲ. ಇಲ್ಲಿರುವ ಕಾಂಗ್ರೆಸ್ ಮತ್ತು ಸಿಪಿಎಂ ನಾಯಕರು ಬಿಜೆಪಿ ನಾಯಕರ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.ಹೀಗಾಗಿ ಬಿಜೆಪಿ ಸೋಲಿಸಲು ನಮಗೆ ಮತ ನೀಡಿದ ಎಂದು ಮನವಿ ಮಾಡಿದರು.

ಮುರ್ಶಿದಾಬಾದ್ ಜಿಲ್ಲೆಯಲ್ಲಿ ರಾಮನವಮಿ ದಿನದಂದು ಸಂಭವಿಸಿದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ದೀದಿ, ಇದು ಪೂರ್ವಯೋಜಿತ ಕೃತ್ಯವಾಗಿದೆ. ಬಿಜೆಪಿ ಉದ್ದೇಶಪೂರ್ವಕವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿತು ಎಂದು ಆರೋಪಿಸಿದ್ದಾರೆ.

ರಾಮನವಮಿ ಆಚರಣೆ ವೇಳೆ ಮುರ್ಶಿದಾಬಾದ್​ನಲ್ಲಿ ಹಿಂದುಗಳನ್ನು ರಕ್ಷಿಸಲು ಮುಖ್ಯಮಂತ್ರಿ ವಿಫಲರಾಗಿದ್ದಾರೆ. ಇದರ ಜವಾಬ್ದಾರಿ ಅವರು ಹೊರಬೇಕು. ಅವರದ್ದು ಹಿಂದು ವಿರೋಧಿ ಸರ್ಕಾರ ಎಂದು ಬಿಜೆಪಿ ಆರೋಪಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!