ಹೊಸದಿಗಂತ ಡಿಜಿಟಲ್ ಡೆಸ್ಕ್:
ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶೇಕಡಾ 73.45 ರಷ್ಟು ವಿದ್ಯಾರ್ಥಿಗಳು ಈ ಬಾರಿ ಉತೀರ್ಣರಾಗಿದ್ದಾರೆ. ಅದರಲ್ಲೂ ಪ್ರಮುಖವಾಗಿ ಈ ಬಾರಿ ಕಲಾ, ವಾಣಿಜ್ಯ ವಿಭಾಗಕ್ಕಿಂತ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶೇಕಡಾ 82.54ರಷ್ಟು ಮಕ್ಕಳು ಪಾಸ್ ಆಗಿದ್ದಾರೆ.
ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಬಾರಿ ಪಾಸ್ ಆಗದ ವಿದ್ಯಾರ್ಥಿಗಳಿಗೆ ಒಂದು ಗುಡ್ನ್ಯೂಸ್ ಕೊಟ್ಟಿದ್ದಾರೆ. ಫಲಿತಾಂಶದಲ್ಲಿ ಯಾರ್ ಯಾರು ಪರೀಕ್ಷೆ ಪಾಸ್ ಆಗಿದ್ದಾರೆ ಅಂತಹವರ ಲಿಸ್ಟ್ ಮಾತ್ರ ಹಾಕಿದ್ದೇವೆ. ಫೇಲ್ ಅಂತ ಈಗಲೇ ಹೇಳೋದಕ್ಕೆ ಬರೋದಿಲ್ಲ ಎಂದರು.
ಏಪ್ರಿಲ್ 24ರಿಂದ ಮೇ 8ರವರೆಗೆ ದ್ವಿತೀಯ ಪಿಯು ಪರೀಕ್ಷಾ -2 ನಡೆಯುತ್ತೆ. ಎರಡನೇ ಮತ್ತು ಮೂರನೇ ಎಕ್ಸಾಂ ಡೇಟ್ ಕೂಡ ಈಗಲೇ ಅನೌನ್ಸ್ ಮಾಡಿದ್ದೇವೆ. ಅನುತೀರ್ಣರಾದ ವಿದ್ಯಾರ್ಥಿಗಳು ಈಗಲೇ 2 ಹಾಗೂ 3ನೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಿ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಬಾರಿ ಮಾತ್ರ ದ್ವಿತೀಯ ಪಿಯು ಪರೀಕ್ಷೆಯ 2ನೇ ಎಕ್ಸಾಂ ಮತ್ತು 3ನೇ ಎಕ್ಸಾಂ ಪರೀಕ್ಷಾ ಶುಲ್ಕ ಇರೋದಿಲ್ಲ. ಮಕ್ಕಳಿಗೆ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಬಾರಿ ಎಕ್ಸಾಂ ಶುಲ್ಕ ಇರುವುದಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಜೆ ಸ್ಪೆಶಲ್ ಕ್ಲಾಸ್ ಮಾಡಲು ಮಾಹಿತಿ ಕೊಟ್ಟಿದ್ದೇವೆ. ಶಿಕ್ಷಣ ಇಲಾಖೆಯ ಈ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ಯಾರು ಈ ಬಾರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿಲ್ಲ ಅಂತಹವರಿಗೆ ಇನ್ನು ಎರಡು ಅವಕಾಶ ಇದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.