ಅಭಿಮಾನಿಗಳೇ ಆತಂಕ ಬೇಡ, ನಾನು ಸುರಕ್ಷಿತನಾಗಿದ್ದೇನೆ: ನಟ ಅರವಿಂದ ಬೋಳಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತುಳು ಚಿತ್ರರಂಗ, ರಂಗಭೂಮಿಯ ನಟ ಅರವಿಂದ ಬೋಳಾರ್ ಅವರು ಸೋಮವಾರ ಸಂಜೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು ಮಂಗಳೂರಿನ ನಗರದ ಪಂಪ್ ವೆಲ್ ಬಳಿ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಾಯಗೊಂಡಿದ್ದು, ಅವರನ್ನು ತತ್ ಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತ ಅವರಿಗೆ ಅಪಘಾತ ನಡೆದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನಾ ಸುದ್ದಿ ಹರಿದಾಡುತ್ತಿದ್ದು, ಬೋಳಾರ್ ಅವರಿಗೆ ಗಂಭೀರ ಗಾಯವಾಗಿದೆ, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿದೆ.

ಈ ಕುರಿತು ಸ್ವತಃ ನಟ ಅರವಿಂದ ಬೋಳಾರ್ ಅವರೇ ಆಸ್ಪತ್ರೆಯಿಂದ ಸ್ಪಷ್ಟನೆ ನೀಡಿದ್ದು, ಅಪಘಾತದಲ್ಲಿ ಯಾವುದೇ ರೀತಿಯ ದೊಡ್ಡ ಮಟ್ಟದ ಗಾಯಗಳಾಗಿಲ್ಲ. ಕಾಲಿಗೆ ಸ್ವಲ್ಪ ಗಾಯವಾಗಿದ್ದು, ತಾನು ಆರೋಗ್ಯವಾಗಿದ್ದೇನೆ. ನಿಮ್ಮ ಆಶೀರ್ವಾದದಿಂದ ಸುರಕ್ಷಿತನಾಗಿದ್ದೇನೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.
.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!