ಪತಿ ಮನೆಯವರಿಂದ ವರದಕ್ಷಿಣೆ ಕಿರುಕುಳ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

ಹೊಸದಿಗಂತ ವರದಿ, ಹಾಸನ :

ಪತಿ ಮನೆಯವರಿಂದ ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡಿರುವ ಹಿನ್ನೆಲೆ ನೇಣುಬಿಗಿದುಕೊಂಡು ವಿವಾಹಿತೆ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಆರೋಪ ಕೇಳಿಬಂದಿದೆ.

ರಕ್ಷಿತಾ (೨೧) ನೇಣಿಗೆ ಶರಣಾದ ವಿವಾಹಿತೆ. ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಕಣದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಆಲೂರು ತಾಲ್ಲೂಕಿನ, ಹಳೇಪಾಳ್ಯ ಗ್ರಾಮದ ವೆಂಕಟೇಶ ಎಂಬುವವರ ಮಗಳು ರಕ್ಷಿತಾ ಮೂರು ವರ್ಷದ ಹಿಂದೆ ಇದೇ ಗ್ರಾಮದ ಪುನೀತ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು. ಕಣದಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ ಪತಿ ಮನೆಯವರು ವರದಕ್ಷಿಣೆ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದರು ಎಂದು ವಿವಾಹಿತೆ ಕುಟುಂಸ್ಥರು ಆರೋಪ ಮಾಡಿದ್ದಾರೆ.

ಇದರಿಂದ ಮನನೊಂದಿದ್ದ ರಕ್ಷಿತಾ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಪ್ಪಿಸ್ಥರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕುಟುಂಸ್ಥರು ಮನವಿ ಮಾಡಿದ್ದಾರೆ.

ಆಲೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!