ಹೊಸದಿಗಂತ ಕಲಬುರಗಿ:
ಮಲ್ಲಾಬಾದ ಏತ್ ನೀರಾವಾರಿ ಯೋಜನೆಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ರೈತರ ಬಹುದಿನದ ಬೇಡಿಕೆಯನ್ನು ಈಡೇರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ನಂಬಿಕೆಯನ್ನು ಉಳಿಸಿಕೊಂಡಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ.ಅಜಯ್ ಧರ್ಮಸಿಂಗ್ ತಿಳಿಸಿದರು.
ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲಾಬಾದ ಏತ ನೀರಾವರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಗೆ ಅನುಮತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನಾನು ಅಭಿನಂದಿಸುತ್ತೇನೆ. ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಕರೆಸಿ ಯೋಜನೆಯ ಅಡಿಗಲ್ಲು ನೆರವೇರಿಸಲಾಗುವುದು ಎಂದು ಹೇಳಿದರು.
ಸುಮಾರು 359 ಕೋಟಿ ರೂಪಾಯಿ ವೆಚ್ಚದ ಮಲ್ಲಬಾದ್ ಏತ ನೀರಾವರಿ ಯೋಜನೆಯಿಂದ 64 ಹಳ್ಳಿಗಳಿಗೆ ಅನುಕೂಲವಾಗಲಿದೆ.ಜೇವರ್ಗಿ, ಶಹಾಪುರ ಹಾಗೂ ಸುರುಪುರ ತಾಲೂಕಿನ ಅಂದಾಜು 1 ಲಕ್ಷ ಹೆಕ್ಟರ್ ಪ್ರದೇಶಕ್ಕೆ ಅನುಕೂಲವಾಗಲಿದ್ದು,ಮುಂದಿನ ಎರಡು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸಿ ಉದ್ಘಾಟನೆಯು ಮಾಡುತ್ತೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಅಲ್ಲಂಪ್ರಭು ಪಾಟೀಲ್,ಕೆಕೆಆರಡಿಬಿ ಕಾರ್ಯದರ್ಶಿ ಸುಂದರೇಶ್ ಬಾಬು ಇದ್ದರು.