ಡಾ. ಮಂಜುನಾಥ್ ಸಾಧನೆಯ ಮುಂದೆ ಆತ ಉಂಗುಷ್ಟಕ್ಕೂ ಸಮನಲ್ಲ: ಡಿಕೆ ಸುರೇಶ್ ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿಯಿಂದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾಕ್ಟರ್ ಮಂಜುನಾಥ್ ಸ್ಪರ್ಧಿಸದ್ದಾರೆ .

ಇತ್ತ ಇದೇ ವಿಚಾರವಾಗಿ ಡಿಕೆ ಸುರೇಶ್ ಅವರು ಬೆಳಿಗ್ಗೆ ಮಾತನಾಡಿದ್ದ ಡಿಕೆ ಸುರೇಶ್ ಡಾ.ಮಂಜುನಾಥ್​ H.D.ದೇವೇಗೌಡರ ಕುಟುಂಬದ ಮತ್ತೊಂದು ಭಾಗ. JDS ಪಕ್ಷ ಸರಿಯಿಲ್ಲ ಎಂದು ಅಳಿಯ ಬಿಜೆಪಿ ಸೇರಿದ್ದಾರೆ ಹೇಳಿಕೆ ನೀಡಿದ್ದರು.

ಇದಕ್ಕೆ ಪರೋಕ್ಷವಾಗಿ ಹೆಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಡಾಕ್ಟರ್ ಮಂಜುನಾಥ್ ಸಾಧನೆಯ ಮುಂದೆ ಆತ ಉಂಗುಷ್ಟಕ್ಕೂ ಸಮನಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಸ್ಪರ್ಧಿಸಲು ಮಂಜುನಾಥ್ ಗೆ ಒತ್ತಡ ಹಾಕಿದ್ದು ನಾನೇ ಎರಡು ಗಂಟೆಗಳ ಕಾಲ ತಂದೆಯವರ ಮೇಲೆ ಒತ್ತಡ ಹಾಕಿದ್ದು ನಾನೆ ಎಂದು ತಿಳಿಸಿದರು.

ಇವತ್ತು ಒಬ್ಬ ವ್ಯಕ್ತಿ ಸಿಎಂ ಮಂಜುನಾಥ್ ಬಗ್ಗೆ ಮಾತನಾಡಿದ್ದಾರೆ.ಮಂಜುನಾಥ್ ಸಾಧನೆಯ ಮುಂದೆ ಆತ ಉಂಗುಷ್ಟಕ್ಕೂ ಸಮನಲ್ಲ.ಅವರು ಗೆದ್ದಿರಬಹುದು ಆದರೆ ಅವರ ಸಾಧನೆ ಏನು? ಎಂದು ಎಚ್ ಡಿ ಕೆ ಪ್ರಶ್ನಿಸಿದರು.

ಮಂಜುನಾಥ ಬಗ್ಗೆ ನೀಡಿರುವ ಹೇಳಿಕೆ ನನಗೆ ನೋವುಂಟು ಮಾಡಿದೆ.ನಮ್ಮ ಬಗ್ಗೆ ಮಾತನಾಡಿ ರಾಜಕೀಯವಾಗಿ ಎದುರಿಸುತ್ತೇವೆ.ಡಾಕ್ಟರ ಮಂಜುನಾಥ ಬಗ್ಗೆ ಮಾತನಾಡುವ ಯೋಗ್ಯತೆ ನಿಮಗೆ ಇಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!