ಸಿನಿಮಾರಂಗಕ್ಕೆ ಎಂಟ್ರಿಕೊಟ್ಟ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕರ್ನಾಟಕದ ಆರೋಗ್ಯ ಸಚಿವ ಡಾ . ಕೆ . ಸುಧಾಕರ್ ಅವರು ಅಭಿನಯಿಸೋಕೆ ರೆಡಿಯಾಗಿದ್ದಾರೆ. ಹೌದು, ನೈಜ ಘಟನೆಯಾಧಾರಿತ ತನುಜಾ ಸಿನಿಮಾದಲ್ಲಿ ಸಚಿವ ಡಾ.ಕೆ.ಸುಧಾಕರ್ ಅಭಿನಯಿಸಿದ್ದಾರೆ. ಈ ಹಿಂದೆ ಕಥೆಗೆ ಮನಸೋತು, ಮಾಜಿ ಸಿಎಂ ಯಡಿಯೂರಪ್ಪ ನಟಿಸಿದ್ದರು.
ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಡಾ.ಕೆ.ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದರು.
ಇನ್ನು ಆ ಘಟನೆಯನ್ನೇ ಸ್ಟೋರಿ ಮಾಡಿಕೊಂಡ ನಿರ್ದೇಶಕ ಹರೀಶ್ ಅವರ ‘ ತನುಜಾ ‘ ಸಿನಿಮಾದಲ್ಲಿ ಮೊದಲು ಮಾಜಿ ಮುಖ್ಯಮಂತ್ರಿ ಬಿ . ಎಸ್ . ಯಡಿಯೂರಪ್ಪ ಅವರು ನಟಿಸುತ್ತಿದ್ದಾರೆ ಎಂದು ಘೋಷಣೆ ಆಗಿತ್ತು . ಆದರೆ , ಈಗ ಆರೋಗ್ಯ ಸಚಿವ ಡಾ . ಕೆ . ಸುಧಾಕರ್ ಅವರು ಕೂಡಾ ಈ ಚಿತ್ರತಂಡವನ್ನು ಸೇರಿಕೊಂಡಿರುವ ವಿಷಯ ತಿಳಿದುಬಂದಿದೆ .
ಚಿತ್ರವು ಶಿವಮೊಗ್ಗ ಸುತ್ತಮತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ. ತಾರಾಗಣದಲ್ಲಿ ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್, ಬಿ.ಎಸ್.ಯಡಿಯೂರಪ್ಪ, ಸಚಿವ ಡಾ.ಕೆ.ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ಇದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!