ಹೊಸದಿಗಂತ ವರದಿ ಮಡಿಕೇರಿ:
ಗಾಳಿಬೀಡು ವ್ಯಾಪ್ತಿಯ ಒಂದನೇ ಮೊಣ್ಣಂಗೇರಿ ಮಳೆಹಾನಿ ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡ ಡಾ.ಮಂಥರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭ ಗ್ರಾಮದ ಸಮಸ್ಯೆಗಳ ಬಗ್ಗೆ ವಿವರಿಸಿದ ಗ್ರಾಮಸ್ಥರು, ರಸ್ತೆ, ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೆ ಸಂತ್ರಸ್ತರಿಗೆ ಜಿಲ್ಲಾಡಳಿತದಿಂದ ಸೂರು ನೀಡುವ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದರು.
ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿ, ಮಾತನಾಡಿದ ಮಂಥರ್ ಗೌಡ ಈ ಕುರಿತು ಜಿಲ್ಲಾಡಳಿತದ ಗಮನ ಸೆಳೆದು ತಕ್ಷಣವೇ ಪರಿಹರಿಸುವ ಭರವಸೆ ನೀಡಿದರು. ಅಲ್ಲದೆ ಅಪಾಯದಲ್ಲಿರುವ ಮನೆಗಳಿಗೆ ಟಾರ್ಪಲ್ ವಿತರಿಸಿದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರಾ ಮೈನಾ, ಎನ್ಎಸ್ಯುಐ ಜಿಲ್ಲಾಧ್ಯಕ್ಷ ರೋಶನ್ ಗಣಪತಿ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಸ್ತುವಾರಿ ಕೋಚನ ಹರಿಪ್ರಸಾದ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಭು ರೈ, ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಡಿಸಿಸಿ ಸದಸ್ಯ ಪುಷ್ಪ ಪೂಣಚ್ಚ, ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಬ್ಲಾಕ್ ಸಂಘಟನಾ ಕಾರ್ಯದರ್ಶಿ ರವಿ ಗೌಡ, ಮುನೀರ್ ಮಾಚಾರ್ ಸ್ಥಳೀಯರಾದ ಕಡ್ಯದ ಕಿರಣ್, ಮೊದ್ದಿಯಾರ ಗಣೇಶ್, ಸಂಜು, ಗೋಪಾಲ ಚಂದ್ರು ಸೇರಿದಂತೆ ಮತ್ತಿತರರು ಹಾಜರಿದ್ದರು.