ಹೊಸದಿಗಂತ ವರದಿ,ಶಿವಮೊಗ್ಗ:
ನಿನ್ನೆ ರಾತ್ರಿ ಹತ್ಯೆಗೀಡಾದ ಸಿಗೇಹಟ್ಟಿ ಹರ್ಷ ನಿವಾಸಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಸೋಮವಾರ ಸಂಜೆ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ತಂದೆ, ತಾಯಿ, ಸಹೋದರಿಯರಿಗೆ ಸಾಂತ್ವನ ಹೇಳಿ, ಶೀಘ್ರವೇ ನ್ಯಾಯ ಒದಗಿಸುವ ಭರವಸೆ ನೀಡಿದರು.