ಹೊಸದಿಗಂತ ವರದಿ, ಗದಗ:
ಲಿಂ.ಡಾ.ತೋಂಟದ ಸಿದ್ದಲಿಂಗ ಶ್ರೀಗಳ ಹೆಸರಿನಲ್ಲಿ ನೀಡಲಾಗುವ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಈ ಬಾರಿ ಭಾಲ್ಕಿ ಹೀರೆಮಠ ಸಂಸ್ಥಾನದ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೆವರು ಅವರಿಗೆ ಅ.6 ರಂದು ನಗರದಲ್ಲಿ ನೀಡಲಾಗುತ್ತಿದೆ.
ಈ ಪ್ರಶಸ್ತಿಯು 5 ಲಕ್ಷ ರೂ.ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.
ಭಾಲ್ಕಿ ಪೂಜ್ಯರು ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ,ಆಂದ್ರರಾಜ್ಯದಲ್ಲಿರುವ ಕನ್ನಡಿಗರನ್ನು ಸಂಘಟಿಸಿ ಮಹಾರಾಷ್ಟ್ರ ಬಸವ ಪರಿಷತ್,ಆಂದ್ರ ಬಸವ ಪರಿಷತ್ ಸ್ಥಾಪಿಸಿ ಬಸವಾದಿ ಶರಣರ ನುಡಿತೇರನ್ನು ಸಮರ್ಥವಾಗಿ ಮುನ್ನೆಡಿಸಿರುವ ಸಾಧನೆಯನ್ನು ಪರಿಗಣಿಸಿ ಲಿಂ.ಡಾಂ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ