ಶಬರಿಮಲೆಗೆ ಭೇಟಿ ನೀಡ್ತಿದ್ದಾರೆ ದ್ರೌಪದಿ ಮುರ್ಮು, ಬೆಟ್ಟಕ್ಕೆ ಕಾಲಿಟ್ಟ ಮೊದಲ ರಾಷ್ಟ್ರಪತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು.

ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಶಬರಿಮಲೆ ಏರುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಭದ್ರತಾ ಇಲಾಖೆಯು ಅವರು ನೇರವಾಗಿ ಇಳಿಯಲು ಸನ್ನಿಧಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಯೋಜಿಸಿತ್ತು ಆದರೆ ವಿರೋಧದಿಂದಾಗಿ ಆ ಆಲೋಚನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು.

66 ವರ್ಷಕ್ಕಿಂತ ಮೇಲ್ಪಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್ ಆದ ನಂತರ ನಿಲಕ್ಕಲ್ ನಲ್ಲಿ ಹೆಲಿಕಾಪ್ಟರ್ ನಲ್ಲಿ ಇಳಿಯಲಿದ್ದಾರೆ. ಕಾರಿನಲ್ಲಿ ಪಂಪಾ ತಲುಪಿ ಇರುಮುಡಿ ಹೊತ್ತು ತೆರೆಳಲಿದ್ದಾರೆ. ಅವರು ದೇವಸ್ವಂ ಅತಿಥಿ ಗೃಹ ಅಥವಾ ಸನ್ನಿಧಾನಂನಲ್ಲಿರುವ ಶಬರಿ ಅತಿಥಿ ಗೃಹದಲ್ಲಿ ತಂಗಲಿದ್ದಾರೆ. ದರ್ಶನದ ಸಮಯವನ್ನು ನಿರ್ದಿಷ್ಟಪಡಿಸಲಾಗಿಲ್ಲ.

ರಾಷ್ಟ್ರಪತಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಸೂಚನೆ ಬಂದಿದ್ದು, ದ್ರೌಪದಿ ಮುರ್ಮು 18 ಮತ್ತು 19 ರಂದು ಶಬರಿಮಲೆಯಲ್ಲಿ ಇರುತ್ತಾರೆ. ಈ ತಿಂಗಳ 14 ರಂದು ಎಡವ ಮಾಸದ ಪೂಜೆಗಾಗಿ ದೇವಾಲಯದ ನಾಡ ತೆರೆಯಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!