ಹೊಸದಿಗಂತ ವರದಿ ಮಡಿಕೇರಿ:
ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೊಡಗು ಬಿಜೆಪಿ ವತಿಯಿಂದ ನಗರದ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬೀನ್ ದೇವಯ್ಯ ನೇತೃತ್ವದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು, ಸಾಮಾನ್ಯ ಮಹಿಳೆಯಾಗಿ ದೇಶವನ್ನು ಮುನ್ನಡೆಸಲೆಂದು ಹಾರೈಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷಡ ಸವಿತಾ ರಾಕೇಶ್, ಪ್ರಮುಖರಾದ ಎಸ್.ಸಿ.ಸತೀಶ್, ಬಿ.ಕೆ.ಜಗದೀಶ್, ಮನು ಮಂಜುನಾಥ್, ಉಮೇಶ್ ಸುಬ್ರಮಣಿ, ಹಾಗೂ ಮತ್ತಿತರರು ಹಾಜರಿದ್ದರು.