July 8, 2026
Wednesday, July 8, 2026
spot_img

8 ಎಕರೆ ಜಾಗದಲ್ಲಿ ಶಿಕ್ಷಣ ಸಾಮ್ರಾಜ್ಯದ ಕನಸು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿ ‘M.Sir’ ರಹಸ್ಯ ಬಯಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತನಾಗಿರುವ ರೇಣುಕೈ ಕೆಮಿಸ್ಟ್ರಿ ಕ್ಲಾಸಸ್ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್ ಕುರಿತು ಹೊಸ ಮಾಹಿತಿಗಳು ಹೊರಬಿದ್ದಿವೆ. ಸಿಬಿಐ ತನಿಖೆಯಲ್ಲಿ ಈತ ದೊಡ್ಡ ಮಟ್ಟದ ಶಿಕ್ಷಣ ಸಂಸ್ಥೆ ನಿರ್ಮಾಣಕ್ಕೆ ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿದೆ.

8 ಎಕರೆ ಜಾಗದಲ್ಲಿ ಬಹುಮಹಡಿ ಕಟ್ಟಡ

ಮೋಟೆಗಾಂವ್ಕರ್ ಮಹಾರಾಷ್ಟ್ರದ ಲಾತೂರ್ ಸಮೀಪದ ಖೋಪೇಗಾಂವ್ ಶಿವಾರ್ ಪ್ರದೇಶದಲ್ಲಿ ಶಾಲೆ ಹಾಗೂ ಕಾಲೇಜು ಆರಂಭಿಸಲು ಯೋಜನೆ ರೂಪಿಸಿದ್ದ ಎನ್ನಲಾಗಿದೆ. ಈಗಾಗಲೇ 8 ಎಕರೆ ಜಾಗದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

‘M.Sir’ ಸಿಬಿಐ ಬಲೆಗೆ ಬಿದ್ದದ್ದು ಹೇಗೆ?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ವೇಳೆ ಸಿಬಿಐ ಅಧಿಕಾರಿಗಳು ಮೋಟೆಗಾಂವ್ಕರ್ ಮನೆ ಹಾಗೂ ಸಂಸ್ಥೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಆತನ ಮೊಬೈಲ್‌ನಲ್ಲಿ ಸೋರಿಕೆಯಾದ ಪ್ರಶ್ನೆಪತ್ರಿಕೆ ಪತ್ತೆಯಾಗಿದೆ. ಪರೀಕ್ಷೆಗೆ ಸುಮಾರು 10 ದಿನಗಳ ಮುಂಚೆಯೇ ಪ್ರಶ್ನೆಪತ್ರಿಕೆ ಮತ್ತು ಉತ್ತರಗಳು ಆತನಿಗೆ ಸಿಕ್ಕಿದ್ದವು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ದೇಶದ ಹಲವು ನಗರಗಳಲ್ಲಿ ಬಂಧನ

ಪ್ರಕರಣಕ್ಕೆ ಸಂಬಂಧಿಸಿ ದೆಹಲಿ, ಜೈಪುರ, ಗುರುಗ್ರಾಮ್, ಪುಣೆ, ನಾಸಿಕ್, ಲಾತೂರ್ ಸೇರಿದಂತೆ ಹಲವು ನಗರಗಳಿಂದ ಈಗಾಗಲೇ 10 ಮಂದಿಯನ್ನು ಬಂಧಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಜಾಲದ ಹಿಂದೆ ಸಂಘಟಿತ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದ್ದ ಶಂಕೆ ವ್ಯಕ್ತವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !