ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬತ್ತಿದ ನದಿಗೆ ಬಿದ್ದ ಕಾರು ಬಿದ್ದಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ.
ಮಧ್ಯ ಪ್ರದೇಶದ ದಾಮೊಹ್ನ ಮಹದೇವ್ ಘಟ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ವಾಹನ ಸೇತುವೆ ದಾಟಿ ಸುನಾರ್ ನದಿಗೆ ಬಿದ್ದಿದೆ. ಜಬಲ್ಪುರ್ ಜಿಲ್ಲೆಯ ನಿವಾಸಿಗಳು ಎರಡು ಎಸ್ಯುವಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಒಂದು ವಾಹನದ ಪ್ರಯಾಣಿಕರು ಅಪಘಾತಕ್ಕೀಡಾಗಿದ್ದಾರೆ. ವಾಹನ ಸಂಪೂರ್ಣ ತಲೆಕೆಳಗಾಗಿ ಬಿದ್ದಿದೆ. ಪ್ರಯಾಣಿಕರು ವಾಹನದಡಿ ಸಿಲುಕಿದ್ದರು.
ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ನೆರವಿಗೆ ಧಾವಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು. ಗಾಯಗೊಂಡವರನ್ನು ದಾಮೊಹ್ ಜಿಲ್ಲೆಯ ಆಸ್ಪತ್ರೆ ಮತ್ತು ಜಬೆರ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಮೃತರ ಮಾಹಿತಿ ಇನ್ನೂ ತಿಳಿದುಬಂದಿಲ್ಲ.