ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬತ್ತಿದ ನದಿಗೆ ಬಿದ್ದ ಕಾರು: ಎಂಟು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬತ್ತಿದ ನದಿಗೆ ಬಿದ್ದ ಕಾರು ಬಿದ್ದಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ.

ಮಧ್ಯ ಪ್ರದೇಶದ ದಾಮೊಹ್​ನ ಮಹದೇವ್​ ಘಟ್​ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ವಾಹನ ಸೇತುವೆ ದಾಟಿ ಸುನಾರ್​ ನದಿಗೆ ಬಿದ್ದಿದೆ. ಜಬಲ್ಪುರ್​ ಜಿಲ್ಲೆಯ ನಿವಾಸಿಗಳು ಎರಡು ಎಸ್​ಯುವಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಒಂದು ವಾಹನದ ಪ್ರಯಾಣಿಕರು ಅಪಘಾತಕ್ಕೀಡಾಗಿದ್ದಾರೆ. ವಾಹನ ಸಂಪೂರ್ಣ ತಲೆಕೆಳಗಾಗಿ ಬಿದ್ದಿದೆ. ಪ್ರಯಾಣಿಕರು ವಾಹನದಡಿ ಸಿಲುಕಿದ್ದರು.

ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ನೆರವಿಗೆ ಧಾವಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು. ಗಾಯಗೊಂಡವರನ್ನು ದಾಮೊಹ್​​ ಜಿಲ್ಲೆಯ ಆಸ್ಪತ್ರೆ ಮತ್ತು ಜಬೆರ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಮೃತರ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!