ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಟಾಟಾಯೆಸ್ ಪಲ್ಟಿಯಾದ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕುಪ್ಪೂರು-ಕುರುಬರಹಳ್ಳಿ ಬಳಿ ನಡೆದಿದೆ. ಅಪಘಾತದ ಪರಿಣಾಮವಾಗಿ ಇಬ್ಬರೂ ಸಾವನ್ನಪ್ಪಿದ್ದಾರೆ. 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಯನಾ (12) ಮತ್ತು ಪ್ರೇಮಮ್ಮ (50) ಮೃತ ದುರ್ದೈವಿ. ಮೃತರು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಕಾಕನೂರು ಗ್ರಾಮದವರು. ಟಾಟಾಯೆಸ್ ನಲ್ಲಿ ನಡೆದ ಸಾಮೂಹಿಕ ಕಾರ್ಯಕ್ರಮದಲ್ಲಿ ಸುಮಾರು 20 ಜನರು ಪಾಲ್ಗೊಂಡಿದ್ದರು. ತಿಪಟೂರಿನ ಹೊನ್ನವಳ್ಳಿಯ ಶ್ರೀ ಕಾಲಭೈರೇಶ್ವರ ಜಾತ್ರೆಗೆ ತೆರಳುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.