ದ್ರೌಪದಿ ಮುರ್ಮು ಆಯ್ಕೆಯನ್ನು ಸ್ವಾಗತಿಸಿದ ಒಡಿಶಾ ಮುಖ್ಯಮಂತ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಒಡಿಶಾದ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ದ್ರೌಪದಿ ಮುರ್ಮುಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬೆಂಬಲ ಸೂಚಿಸಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್‌ ಮಾಡಿರುವ ನವೀನ್‌ ಪಾಟ್ನಾಯಕ್‌ ʻದೇಶದ ಅತ್ಯುನ್ನತ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ದ್ರೌಪದಿ ಮುರ್ಮು ಅವರಿಗೆ ನನ್ನ ಅಭಿನಂದನೆಗಳು. ಗೌರವಾನ್ವಿತ ಪ್ರಧಾನಿಯಾದ ನರೇಂದ್ರ ಮೋದಿ ಅವರು ನನ್ನೊಂದಿಗೆ ಈ ವಿಚಾರ ಚರ್ಚಿಸಿದ್ದು ನನಗೆ ಬಹಳ ಸಂತೋಷವಾಯಿತು, ಒಡಿಶಾದ ಜನರಿಗೆ ಇದು ನಿಜಕ್ಕೂ ಹೆಮ್ಮೆಯ ಕ್ಷಣʼವಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!