ಕುಡಿದು ಬಂದು ಗಲಾಟೆ: ಸಿಟ್ಟಿನಿಂದ ಮಗನನ್ನೇ ಕೊಂದ ತಂದೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುಡಿದು ಬಂದು ತಂದೆಯೊಂದಿಗೆ ಗಲಾಟೆ ಮಾಡಿದ ಮಗನನ್ನೇ ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ವರಂಗ ಮೂಡುಬೆಟ್ಟು ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಸತೀಶ್‌ ಪೂಜಾರಿ (42) ಮೃತಪಟ್ಟ ವ್ಯಕ್ತಿ.

ಸತೀಶ್‌ ಪೂಜಾರಿ ಮತ್ತು ತಂದೆ ಕುಟ್ಟಿ ಪೂಜಾರಿ ಇಬ್ಬರೇ ಮನೆಯಲ್ಲಿ ವಾಸವಿದ್ದು, ಸತೀಶ್‌ ಪೂಜಾರಿ ಪ್ರತಿದಿನ ಕುಡಿದು ಮನೆಗೆ ಬಂದು ತಂದೆಯೊಂದಿಗೆ ಗಲಾಟೆ ಮಾಡುತ್ತಿದ್ದರು. ಶುಕ್ರವಾರ ರಾತ್ರಿಯೂ ಸತೀಶ ಪೂಜಾರಿ ವಿಪರೀತ ಮದ್ಯಪಾನ ಸೇವಿಸಿ ಬಂದು ಕುಟ್ಟಿ ಪೂಜಾರಿ ಮಲಗಿದ್ದ ಕೋಣೆಯ ಬಾಗಿಲಿಗೆ ಕಾಲಿನಿಂದ ಒದ್ದು ಅವರನ್ನು ಮನೆಯ ಹೊರಗೆ ಎಳೆದು ತಂದಾಗ ಕೋಪಗೊಂಡ ಕುಟ್ಟಿ ಪೂಜಾರಿ ಅಡುಗೆ ಕೋಣೆಯಲ್ಲಿದ್ದ ಒಲೆ ಬೆಂಕಿ ಊದುವ ಕಬ್ಬಿಣದ ಕೊಳವೆಯಿಂದ ಸತೀಶ ಪೂಜಾರಿಗೆ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡ ಸತೀಶ ಪೂಜಾರಿಯವರು ಮೃತಪಟ್ಟಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!