ಮದ್ಯಸೇವಿಸಿ ವೈದ್ಯನ ಅವಾಂತರ: ಅಮಾನತಿಗೆ ಸಚಿವ ಗುಂಡೂರಾವ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸರ್ಕಾರಿ ಕರ್ತವ್ಯನಿರತ ವೈದ್ಯನ (Docter) ವಿರುದ್ಧ ಮದ್ಯಸೇವನೆ ಆರೋಪ ಹಿನ್ನಲೆ ವೈದ್ಯ ಬಾಲಕೃಷ್ಣ ಅಮಾನತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಿಕ್ಕಮಗಳೂರು ಡಿಹೆಚ್​ಒಗೆ ಆದೇಶ ನೀಡಿದ್ದಾರೆ.

ಮದ್ಯಸೇವನೆಯಿಂದಾಗಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ವೇಳೆ ಕುಸಿದುಬಿದಿದ್ದಾರೆ. ವೈದ್ಯನ ಅವಾಂತರದಿಂದ ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳೆಯರು ಪರದಾಡುವಂತಾಗಿದೆ.

ಈ ಕುರಿತು ಚಿಕ್ಕಮಗಳೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಉಮೇಶ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!