ಕಂಠಪೂರ್ತಿ ಕುಡಿದು ಜಗಳ: ತಮ್ಮನನ್ನೇ ಕೊಂದು ಅಣ್ಣ ಪರಾರಿ

ಹೊಸದಿಗಂತ ವರದಿ, ಪುತ್ತೂರು:

ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ.
ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ನವರಾದ ನಿಂಗನ ಗೌಡ, ಒಡಹುಟ್ಟಿದ ತಮ್ಮನಾದ ಮಾದೇವಪ್ಪ ನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ.
ಪುತ್ತೂರು ನಗರ ಠಾಣಾಯಲ್ಲಿಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!