ರಾಜ್ಯದಲ್ಲಿ ಶುಷ್ಕ ವಾತಾವರಣ: ಕೆಲವೆಡೆ ಮಂಜು ಮುಸುಕುವ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಒಳನಾಡಿನಲ್ಲಿ ಚಳಿ ಜತೆಗೆ ಬಿಸಿಲು ವಾತಾವರಣ ಇರಲಿದೆ. ಜತೆಗೆ ರಾಜ್ಯಾದ್ಯಂತ ಕೆಲವು ಕಡೆ ಒಣಹವೆ ದಕ್ಷಿಣದ ಹೊರವಲಯದಲ್ಲಿ ಬಿಸಿಲು ಮತ್ತು ಶೀತ ಇರುತ್ತದೆ. ಇದಲ್ಲದೆ, ಕರ್ನಾಟಕದ ಹವಾಮಾನ ಮುನ್ಸೂಚನೆಯು ರಾಜ್ಯದ ಕೆಲವು ಭಾಗಗಳಲ್ಲಿ ಒಣ ಹವಾಮಾನ ಇರುತ್ತದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಉಂಟಾಗಬಹುದು. ಬೆಳಗ್ಗೆ ಕೆಲವೆಡೆ ಮಂಜು ಇರುತ್ತದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್.

ದಕ್ಷಿಣ ಹೊರವಲಯದ ಕೆಲವು ಭಾಗಗಳು ಶೀತ ವಾತಾವರಣಕ್ಕೆ ತುತ್ತಾದರೆ, ಕರಾವಳಿ ಮತ್ತು ಉತ್ತರ ಹೊರವಲಯದ ಜನರು ಸುಡುವ ಬಿಸಿಲಿಗೆ ಒಡ್ಡಿಕೊಳ್ಳುತ್ತಾರೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಭಾಗಗಳಲ್ಲಿ ಬೆಳಗ್ಗೆ ಮಂಜು ಕವಿದಿದೆ.ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವೊಮ್ಮೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕಿದ ರೀತಿ ಇರಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!