ಕಾಯ್ದೆ ಜಾರಿಯಿಂದ ಗೋವುಗಳ ಹತ್ಯೆ ಸಂಖ್ಯೆ ಇಳಿಕೆ: ಸಚಿವ ಚೌಹಾಣ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದಲ್ಲಿ ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ, ಜೊತೆಗೆ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಯ್ದೆ ಜಾರಿಯಿಂದ ಗೋವುಗಳ ಹತ್ಯೆ ಸಂಖ್ಯೆ ಇಳಿಕೆಯಾಗಿದೆ.ಮೂರು ವರ್ಷಗಳ ಅಂತರದಲ್ಲಿ ಹಸುಗಳ ಉಳಿಸಬೇಕು ಎಂದು ಗೋಹತ್ಯೆ ಕಾನೂನನ್ನು ಬಿಗಿ ಮಾಡಿದ್ದೇವೆ. ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಗೋಹತ್ಯೆ ಕಾನೂನನ್ನು ಬಿಗಿ ಮಾಡಿದ್ದೇವೆ. ಗೋಹತ್ಯೆ ಮಾಡಿದರೇ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಮಾಡಿದ್ವಿ, 50 ಸಾವಿರದಿಂದ 10 ಲಕ್ಷದವರೆಗಿನ ದಂಡ ವಿಧಿಸುವ ಕೆಲಸ ಮಾಡಿದ್ದೇವೆ ಎಂದರು.

ಎಸ್​.ನಿಜಲಿಂಗಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, 1964ರಿಂದಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗಿತ್ತು. ಆಗ ಗೋಹತ್ಯೆಗೆ 1 ಸಾವಿರ ದಂಡ, 6 ತಿಂಗಳು ಜೈಲು ಶಿಕ್ಷೆ ಇತ್ತು. ಈಗ ಮತ್ತಷ್ಟು ಅಂಶಗಳನ್ನು ಸೇರಿಸಿ ಕಾಯ್ದೆ ತಿದ್ದುಪಡಿ ಮಾಡಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ನವರು ಯಾವುದೇ ಸಾಕ್ಷಿ, ದಾಖಲೆ ಇಲ್ಲದೆ ಪಶುಸಂಗೋಪನೆ ಇಲಾಖೆ ಮತ್ತು ಸರ್ಕಾರದ ವಿರುದ್ದ ಸುಳ್ಳು ಆರೋಪ‌ ಮಾಡಿದ್ದಾರೆ. ನಾನು ಸಚಿವನಾದ ಬಳಿಕ ಗೋರಕ್ಷಕನಾಗಿ, ಗೋ ಸೇವೆ ಮಾಡುತ್ತಿದ್ದೇನೆ. ಕಾಯ್ದೆಯಿಂದ ಗೋಹತ್ಯೆಯ ಸಂಖ್ಯೆ ಕಡಿಮೆಯಾಗಿದೆ. ಗೋಶಾಲೆಗಳ ನಿರ್ವಹಣೆ ಮಾಡುತ್ತಿದ್ದೇವೆ. ಖಾಸಗಿ ಗೋಶಾಲೆಗಳಿಗೂ ಉತ್ತೇಜನ ನೀಡುತ್ತಿದ್ದೇನೆ. ದೇಶದಲ್ಲಿ ಮೊದಲ ಬಾರಿಗೆ ಪಶುಸಂಜೀವಿನಿ ಆಂಬುಲೆನ್ಸ್ ಶುರು ಮಾಡಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!