ಭಾರತ್ ಜೋಡೋ ಯಾತ್ರೆ ವೇಳೆ ಬಸ್​ ಹರಿದು ಕೈ ಕಾರ್ಯಕರ್ತ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ್ ಜೋಡೋ ಯಾತ್ರೆ ವೇಳೆ ಕಾರ್ಯಕರ್ತರನ್ನು ಕರೆ ತಂದಿದ್ದ ಖಾಸಗಿ ಬಸ್ ಡಿಕ್ಕಿಯಾಗಿ, ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ಹಿರಿಯೂರು ಪಟ್ಟಣದ ಟಿ.ಬಿ.ವೃತ್ತದ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ರಮೇಶ(38) ಮೃತ ದುರ್ದೈವಿ. ಖಾಸಗಿ ಬಸ್​ ಭಾರತ ಜೋಡೋ ಯಾತ್ರೆಗೆ ಕಾರ್ಯಕರ್ತನನ್ನು ಕರೆದುಕೊಂಡು ಬಂದಿತ್ತು. ಸಾವನ್ನಪ್ಪಿದ ರಮೇಶ ಕೂಡ ಜೋಡೋ ಯಾತ್ರೆಯಲ್ಲಿ ಭಾಗವಿಸಲೆಂದು ಆಗಮಿಸಿದ್ದರು. ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಹಿರಿಯೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!