ಹೊಸದಿಗಂತ ಡಿಜಿಟಲ್ ಡೆಸ್ಕ್:
ನವದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್(Bansuri Swaraj) ಅವರು ಪ್ರಚಾರದ ವೇಳೆ ಗಾಯಗೊಂಡಿದ್ದಾರೆ.
ಇಂದು ಚುನಾವಣಾ ಪ್ರಚಾರದ ವೇಳೆ ನನ್ನ ಕಣ್ಣಿಗೆ ಸ್ವಲ್ಪ ಗಾಯವಾಗಿದೆ ಎಂದು ಬಾನ್ಸುರಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಕಣ್ಣಿಗೆ ಗಾಯವಾದ ನಂತರವೂ ಬಾನ್ಸುರಿ ಸ್ವರಾಜ್ ಅವರು ಸಾರ್ವಜನಿಕ ಸಂಪರ್ಕ ಅಭಿಯಾನವನ್ನು ನಡೆಸಿದರು.
ಬ್ಯಾಂಡೇಜ್ ಹಾಕಿಕೊಂಡೇ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.
ಬಾನ್ಸುರಿ ಅವರು ತಮ್ಮ ಕಣ್ಣಿನ ಚಿಕಿತ್ಸೆ ನಂತರ ವೈದ್ಯರೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. ಚಿಕಿತ್ಸೆ ಮತ್ತು ಆರೈಕೆಗಾಗಿ ಮೋತಿ ನಗರದ ಡಾ.ನೀರಜ್ ವರ್ಮಾ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಬಾನ್ಸುರಿ ಸ್ವರಾಜ್ ಅವರು ರಮೇಶ್ ನಗರದ ಸನಾತನ ಧರ್ಮ ಮಂದಿರದಲ್ಲಿ ಆಯೋಜಿಸಿದ್ದ ಮಾತಾ ಕಿ ಚೌಕಿಯಲ್ಲಿ ಭಾಗವಹಿಸಿದ್ದರು. ಇಲ್ಲಿ ದುರ್ಗೆಯನ್ನು ಪೂಜಿಸಿ ಆಶೀರ್ವಾದ ಪಡೆದರು.
ಬಾನ್ಸುರಿ ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಬಾನ್ಸುರಿ ಸ್ವರಾಜ್ ಅವರು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ.