ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ: ಮುಡಾ ಹಗರಣದ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿ ಮಠ ಶ್ರೀ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣದಲ್ಲಿ ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಕುರಿತು ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

ಈ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿಕೊಂಡಿದ್ದು ಅವರ ಪತ್ನಿ ಪಾರ್ವತಿ ರಂಗ ಪ್ರವೇಶ ಮಾಡಿದ್ದಾರೆ. ಈ ಒಂದು ಯುದ್ಧದಲ್ಲಿ ರಾಜನೇ ಗೆಲ್ಲುತ್ತಾನೆ ಆದರೆ ಸದ್ಯಕ್ಕೆ ದೈವಬಲ ಇಲ್ಲ. ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿಹಾಕಿಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಆ ಸಂಕಷ್ಟದಿಂದ ಹೊರಬರಲು ಸಾಕಷ್ಟು ಪ್ರಯತ್ನಗಳು ನಡೆದಿವೆ. ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ ಎಂದು ತಿಳಿಸಿದರು.

ಅದೇ ರೀತಿಯಾಗಿ ನಟ ದರ್ಶನ್ ಅವರ ಬೇಲ್ ಕುರಿತು ಕೂಡ ಕೋಡಿಶ್ರೀಗಳು ನಿನ್ನೆ ಭವಿಷ್ಯ ನುಡಿದಿದ್ದರು. ಪಾಪ ಪಾಷಣ ಕಳೆದುಹೋಗಬೇಕು. ಮಾಡಿರುವ ಕರ್ಮವು ಫಲವತ್ತಾದರೆ ಯಾರೇನು ಮಾಡಲು ಸಾಧ್ಯ? ಪಾಪದ ಕೆಲಸ ಮಾಡುವುದಕ್ಕೆ ಹೆದರಿಕೆ ಇರಬೇಕಿತ್ತು. ಆದರೆ, ಪಾಪ ಮಾಡುವುದಕ್ಕೆ ನಾವು ಹೆದರುತ್ತಿಲ್ಲ. ಪುಣ್ಯ ಮಾಡುವುದಕ್ಕೆ ನಾವು ಹೆದರುತ್ತಿದ್ದೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!